ಪ್ರೇಮ ವೈಫಲ್ಯ ಕಾರಣ; 10 ದಿನಗಳ ಅವಧಿಯಲ್ಲಿ ಮೂರು ಆತ್ಮಹತ್ಯೆ ಪ್ರಕರಣ

Prasthutha|

ಲಕ್ನೋ: 10 ದಿನಗಳ ಅವಧಿಯಲ್ಲಿ ಮೂವರು ವಿದ್ಯಾರ್ಥಿನಿಯರು ಆತ್ಮಹತ್ಯೆಗೈದ ಪ್ರಕರಣಗಳು  ಉತ್ತರ ಪ್ರದೇಶದ ಸೀತಾಪುರದಲ್ಲಿ ನಡೆದಿವೆ.

- Advertisement -

ಒಂದೇ ಕಾಲೇಜಿನ  11-12ನೇ ತರಗತಿಯಲ್ಲಿ ಓದುತ್ತಿದ್ದ ಮೂವರು ವಿದ್ಯಾರ್ಥಿನಿಯರು ಡಿ.10ರಿಂದ 18ರ ನಡುವೆ ಆತ್ಮಹತ್ಯೆ ಮಾಡಿಕೊಂಡಿದ್ದು, ಮೂವರ ಆತ್ಮಹತ್ಯೆಗೆ ಪ್ರೇಮ ಪ್ರಕರಣವೇ ಕಾರಣವೆಂದು ಪೊಲೀಸ್ ತನಿಖೆಯಿಂದ ಬಹಿರಂಗವಾಗಿದೆ.

ಈ ಎಲ್ಲಾ ಪ್ರಕರಣಗಳಲ್ಲಿ ಕಾಲೇಜಿನ  ಯಾವುದೇ ವಿದ್ಯಾರ್ಥಿಗಳು ಅಥವಾ ಶಿಕ್ಷಕರು ಭಾಗಿಯಾಗಿಲ್ಲವೆಂದು ತನಿಖೆಯಿಂದ ತಿಳಿದುಬಂದಿದೆ ಎಂದು ಸೀತಾಪುರ ಸಹಾಯಕ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.

- Advertisement -

ಡಿ.10ರಂದು ನಡೆದ ಮೊದಲ ಆತ್ಮಹತ್ಯೆ ಪ್ರಕರಣದಲ್ಲಿ ಯುವತಿ ತನ್ನ ನೆರೆಯವನಾದ ರಾಹುಲ್ ಯಾದವ್ ಜೊತೆ ಪ್ರೇಮ ಸಂಬಂಧ ಹೊಂದಿದ್ದಳು. ಇವರಿಬ್ಬರ ಸಂಬಂಧವನ್ನು ಹುಡುಗಿಯ ಮನೆಯವರು ಒಪ್ಪದ ಕಾರಣ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ರಾಹುಲ್ ಯಾದವ್ ನನ್ನು ಪೊಲೀಸರು ಬಂಧಿಸಿದ್ದಾರೆ.

2ನೇ ಆತ್ಮಹತ್ಯೆ ಘಟನೆಯು ಡಿ.12ರಂದು ನಡೆದಿದ್ದು, ಅಂಕಿತ್ ಪಾಸ್ವಾನ್ ಎಂಬ ಯುವಕನನ್ನು ಓರ್ವ ವಿದ್ಯಾರ್ಥಿನಿ ಪ್ರೀತಿಸುತ್ತಿದ್ದಳು. ಹುಡುಗಿಯ ಮನೆಯವರು ಈ ಸಂಬಂಧಕ್ಕೆ ಒಪ್ಪಿದ್ದರು. ಆದರೆ ಅಂಕಿತ್ ನ ತಾಯಿ ಮದುವೆಗೆ ವರದಕ್ಷಿಣೆಯಾಗಿ ಬೈಕ್ ಕೇಳಿದ್ದರು. ಇದರಿಂದ ಚಿಂತೆಗೀಡಾದ ಯುವತಿ ಇಲಿ ಪಾಷಾಣ ಕುಡಿದು ಪ್ರಾಣ ಕಳೆದುಕೊಂಡಿದ್ದಾಳೆ.

ನದಿಗೆ ಹಾರಿ ಮತ್ತೊಬ್ಬ ವಿದ್ಯಾರ್ಥಿನಿ ಸಾವನ್ನಪ್ಪಿದ್ದು, ಇವಳು ಕೂಡಾ ಒಬ್ಬ ಯುವಕನನ್ನು ಪ್ರೀತಿಸುತ್ತಿದ್ದಳು. ಯುವತಿಯ ಸಂಬಂಧಿ ಸಂಜಯ್ ತಿವಾರಿ ಆಕೆಯ ಪ್ರೇಮ ಪ್ರಕರಣದ ಬಗ್ಗೆ ಪೋಷಕರಿಗೆ ತಿಳಿಸಿದ್ದರಿಂದ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಪ್ರಕರಣದಲ್ಲಿ ಸಂಜಯ್ ತಿವಾರಿ ಭಾಗಿಯಾಗಿದ್ದಾನೆಂದು ಮೃತ ಯುವತಿಯ ಸಹೋದರಿ ಆರೋಪಿಸಿದ್ದು, ಈ ಬಗ್ಗೆ ತನಿಖೆ ಮಾಡುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

Join Whatsapp