DYFI ಕಾರ್ಯಕರ್ತನ ಇರಿದು ಹತ್ಯೆ | ದಾಳಿ ಮಾಡಿದ ತಂಡದ ಓರ್ವನಿಗೆ ಗಾಯ; ಮಂಗಳೂರು ಆಸ್ಪತ್ರೆಯಲ್ಲಿ ದಾಖಲು

Prasthutha|

ಕಾಸರಗೋಡು : ಕಳೆದ ರಾತ್ರಿ ಕಾಂಞಗಾಡ್ ನಲ್ಲಿ ಡಿವೈಎಫ್ ಐ ಕಾರ್ಯಕರ್ತರೊಬ್ಬರನ್ನು ತಂಡವೊಂದು ಇರಿದು ಕೊಲೆ ಮಾಡಿದ ಘಟನೆ ನಡೆದಿದೆ. ಮೃತರನ್ನು ಅಬ್ದುಲ್ ರಹ್ಮಾನ್ (29) ಎಂದು ಗುರುತಿಸಲಾಗಿದೆ.

- Advertisement -

ದಾಳಿಯ ವೇಳೆ ಓರ್ವ ಆರೋಪಿಗೂ ಗಾಯಗಳಾಗಿದ್ದು, ಆತನನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡ ಆರೋಪಿಯನ್ನು ಇರ್ಷಾದ್ (26) ಎಂದು ಗುರುತಿಸಲಾಗಿದೆ.

ಕಲ್ಲೂರಾವಿ ನಿವಾಸಿ ರಹ್ಮಾನ್ ಬೈಕ್ ನಲ್ಲಿ ಸ್ನೇಹಿತನ ಜೊತೆ ಮನೆಗೆ ಹಿಂದಿರುಗುತ್ತಿದ್ದ ವೇಳೆ ಘಟನೆ ನಡೆದಿದೆ. ಕಲ್ಲೂರಾವಿ-ಹಳೆಕಡಪ್ಪುರ ಬಳಿ, ತಂಡವು ದಾಳಿ ನಡೆಸಿದೆ.

- Advertisement -

ತಂಡವು ರಹ್ಮಾನ್ ಗೆ ಇರಿದು ಪರಾರಿಯಾಗಿದೆ. ಗಾಯಗೊಂಡಿದ್ದ ರಹ್ಮಾನ್ ರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅವರು ಜೀವಂತವಾಗಿ ಉಳಿಯಲಿಲ್ಲ. ಜೊತೆಗಿದ್ದ ಶುಹೈಬ್ ಅವರೂ ಗಾಯಗೊಂಡಿದ್ದಾರೆ.

ಇತ್ತೀಚೆಗೆ ಸ್ಥಳೀಯಾಡಳಿತ ಸಂಸ್ಥೆ ಚುನಾವಣೆಯ ವಿಜಯೋತ್ಸವ ವೇಳೆ ಡಿವೈಎಫ್ ಐ ಮತ್ತು ಮುಸ್ಲಿಂ ಲೀಗ್ ಕಾರ್ಯಕರ್ತರ ನಡುವೆ ಘರ್ಷಣೆಯಾಗಿತ್ತು. ಇದಕ್ಕೆ ಪ್ರತೀಕಾರವಾಗಿ ಮುಸ್ಲಿಂ ಲೀಗ್ ಕಾರ್ಯಕರ್ತರ ಕೈವಾಡದಿಂದ ಈ ಕೃತ್ಯ ನಡೆದಿರಬಹುದು ಎಂದು ಆರೋಪಿಸಲಾಗಿದೆ. ಕಾಂಞಗಾಡ್ ನಲ್ಲಿ ಇಂದು ಮುಷ್ಕರಕ್ಕೆ ಕರೆ ನೀಡಲಾಗಿದೆ.

ಕೃತ್ಯದಲ್ಲಿ ಆರು ಮಂದಿ ಶಾಮೀಲಾಗಿದ್ದಾರೆ. ಘಟನೆಯ ಹಿನ್ನೆಲೆಯಲ್ಲಿ ನಗರದಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರಕರಣ ದಾಖಲಾಗಿದೆ.  

Join Whatsapp