ಊಟಕ್ಕೆಂದು ಸ್ನೇಹಿತರ ಮನೆಗೆ ಹೋಗಿದ್ದ ಮಹಿಳಾ ಸಿಐಡಿ ಡಿವೈಎಸ್ ಪಿ ಆತ್ಮಹತ್ಯೆ

Prasthutha|

ಬೆಂಗಳೂರು : ಇಲ್ಲಿನ ಅನ್ನಪೂರ್ಣೇಶ್ವರಿ ನಗರದಲ್ಲಿ ಡಿವೈಎಸ್ ಪಿ ಲಕ್ಷ್ಮಿ ವಿ.(33) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಲಕ್ಷ್ಮಿ ಅವರು 2014ರ ಕೆಪಿಎಸ್ ಸಿ ಬ್ಯಾಚ್ ನ ಅಧಿಕಾರಿಯಾಗಿದ್ದರು. 2017ರಲ್ಲಿ ನೇಮಕಾತಿಗೊಂಡಿದ್ದ ಲಕ್ಷ್ಮಿ ಅವರು ಪ್ರಸ್ತುತ ಸಿಐಡಿ ಡಿವೈಎಸ್ ಪಿ ಕಾರ್ಯ ನಿರ್ವಹಿಸುತ್ತಿದ್ದರು.  

- Advertisement -

ಸಿಐಡಿ ಡಿವೈಎಸ್ ಪಿ ಲಕ್ಷ್ಮಿ ಅವರು ಪರಿಚಿತರ ಮನೆಗೆ ಊಟಕ್ಕೆ ಹೋದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಲಕ್ಷ್ಮಿ ಅವರು ಮೂಲತಃ ಕೋಲಾರದ ಮಾಲೂರಿನವರಾಗಿದ್ದು, ಕೋಣನಕುಂಟೆಯಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದರು.

- Advertisement -

ಸ್ಥಳಕ್ಕೆ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Join Whatsapp