ವಿಧಾನ ಪರಿಷತ್ ಚುನಾವಣೆ| ಬಿಜೆಪಿಗೆ ಬೆಂಬಲದ ಬಗ್ಗೆ ಶೀಘ್ರ ನಿರ್ಧಾರ: ಕುಮಾರಸ್ವಾಮಿ

Prasthutha|

ರಾಮನಗರ: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲದ ಬಗ್ಗೆ ಈ ಬಗ್ಗೆ ಸದ್ಯದಲ್ಲೇ ತೀರ್ಮಾನ ಮಾಡುತ್ತೇವೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

- Advertisement -

ಈ ಬಗ್ಗೆ ಬಿಡದಿಯಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ ಕಾಂಗ್ರೆಸ್ ನಾಯಕರು ನಮಗೆ ಜೆಡಿಎಸ್ ಬೆಂಬಲ ಬೇಡ ಎಂದು ಹೇಳಿದ್ದಾರೆ. ಕರೆಯದೇ ಇರುವವರ ಮನೆಯ ಬಾಗಿಲಿಗೆ ಹೋಗಲು ಆಗದು’ ಎಂದರು.

ಪರಿಷತ್ ಚುನಾವಣೆಯು ಮುಂದಿನ ವಿಧಾನಸಭೆ ಚುನಾವಣೆಯ ದಿಕ್ಸೂಚಿ ಅಲ್ಲ. ಆದರೆ ಚುನಾಯಿತ ಪ್ರತಿನಿಧಿಗಳ ಬೆಂಬಲ ಯಾರಿಗೆ ಎಂಬುದು ಗೊತ್ತಾಗಲಿದೆ ಎಂದರು.

- Advertisement -

ಮೋದಿ ಅವರಿಗೆ ದೇವೇಗೌಡರ ಮೇಲೆ ಅಪಾರ ವಿಶ್ವಾಸ ಹಾಗೂ ಗೌರವ ಇದೆ. ಹಾಸನದಲ್ಲಿ ಐಐಟಿ ಸ್ಥಾಪನೆ ವಿಚಾರದಲ್ಲಿ ಗೌಡರು ಮೋದಿಯವರನ್ನು ಭೇಟಿ ಮಾಡಿದ್ದಾರೆ. ಮೈತ್ರಿ ಕುರಿತು ಅವರಿಬ್ಬರ ಬಗ್ಗೆ ಮಾತುಕತೆ ನಡೆದಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ದೇವೇಗೌಡರು ದೆಹಲಿಯಿಂದ ಬಂದ ಬಳಿಕ ಈ ಬಗ್ಗೆ ಮಾತುಕತೆ‌ ನಡೆಸುತ್ತೇನೆ ಎಂದರು.

Join Whatsapp