ಚುನಾವಣೆ ವೇಳೆ ಇಡಿ ದಾಳಿ ಖಂಡನೀಯ: ಮಲ್ಲಿಕಾರ್ಜುನ ಖರ್ಗೆ

Prasthutha|

- Advertisement -

ಕಲಬುರಗಿ: ಪಂಚರಾಜ್ಯಗಳಲ್ಲಿ ಚುನಾವಣೆ ಘೋಷಣೆಯಾಗಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿರುವ ಹೊತ್ತಿನಲ್ಲಿಯೃ ಕೇಂದ್ರ ಸರ್ಕಾರ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷರ ಹಾಗೂ ಮುಖ್ಯಮಂತ್ರಿ ಪುತ್ರನ‌ ಮನೆ ಮೇಲೆ ಇಡಿ ದಾಳಿ ನಡೆಸುತ್ತಿರುದು ಖಂಡನೀಯ ಎಂದು ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜಪುನ ಖರ್ಗೆ ಹೇಳಿದ್ದಾರೆ. ಪಂಚ ರಾಜ್ಯಗಳ ಚುನಾವಣಾ ಫಲಿತಾಂಶವೇ ಈ ನಡೆಗೆ ಉತ್ತರ ನೀಡಲಿದೆ ಎಂದೂ ಹೇಳಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಪಂಚ ರಾಜ್ಯಗಳ ಚುನಾವಣೆ ಸಮಯದಲ್ಲಿ ಇಡಿ ದಾಳಿ ಮಾಡಿರುವ ತಪ್ಪಿನ ಅರಿವು ಚುನಾವಣಾ ಫಲಿತಾಂಶ ನಂತರ ಕೇಂದ್ರ ಸರ್ಕಾರಕ್ಕಾಗಲಿದೆ ಎಂದರು.

- Advertisement -

ಕಾಂಗ್ರೆಸ್ ಇಡಿ ಹಾಗೂ ಐಟಿ ಸೇರಿ ಇತರ ಯಾವುದೇ ದಾಳಿಗಳಿಗೆ ಹೆದರುವುದಿಲ್ಲ.‌ ಕಾಂಗ್ರೆಸ್‌ ಪ್ರಜಾಪ್ರಭುತ್ವ ನೆಲೆಗಟ್ಟಿನ ಹಾಗೂ ನೈತಿಕ ಮೌಲ್ಯಗಳ ಆಧಾರದ ಮೇಲೆ ರಾಜಕಾರಣ ಮಾಡುತ್ತದೆ.‌ ಅದೇ ತತ್ವದ ಆಧಾರದ ಮೇಲೆ ಚುನಾವಣೆ ಎದುರಿಸಲಿದೆ. ಚುನಾವಣಾ ಫಲಿತಾಂಶ ನಂತರ ಕೇಂದ್ರ ಸರ್ಕಾರಕ್ಕೆ ತಪ್ಪಿನ ಅರಿವಾಗುತ್ತದೆ ಎಂದರು.

Join Whatsapp