Home ಟಾಪ್ ಸುದ್ದಿಗಳು ಇಡಿ ಬಿಜೆಪಿಯ ಪೊಲಿಟಿಕಲ್ ಟೂಲ್ ಕಿಟ್: ಸಚಿವ ಕೃಷ್ಣ ಬೈರೇಗೌಡ

ಇಡಿ ಬಿಜೆಪಿಯ ಪೊಲಿಟಿಕಲ್ ಟೂಲ್ ಕಿಟ್: ಸಚಿವ ಕೃಷ್ಣ ಬೈರೇಗೌಡ

ಹಾಸನ: ಜಾರಿ ನಿರ್ದೇಶನಾಲಯ(ಇ.ಡಿ) ಬಿಜೆಪಿಯ ಪೊಲಿಟಿಕಲ್ ವಿಂಗ್, ಪೊಲಿಟಿಕಲ್ ಟೂಲ್ ಕಿಟ್ ಆಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಆರೋಪಿಸಿದರು.


ಬುಧವಾರ ಸಕಲೇಶಪುರ ತಾಲ್ಲೂಕಿನ ದೊಡ್ಡತಪ್ಪಲೆ ಬಳಿ ಭೂಕುಸಿತ ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಇ.ಡಿಯವರು ಬಂದು, ತಪ್ಪು ಮಾಡುವವರಿಗೆ ರಕ್ಷಣೆ ಕೊಡ್ತೀವಿ. ನೀವು ಸಿಎಂ ಮೇಲೆ ಹೇಳಿಕೆ ಕೊಡಿ ಎನ್ನುತ್ತಾರೆ. ತಪ್ಪು ಮಾಡಿರುವವರನ್ನು ರಕ್ಷಣೆ ಮಾಡಿ, ಹಗರಣ ಮುಚ್ಚಿ ಹಾಕಿ, ಸಿಎಂ ತಲೆಗೆ ಕಟ್ಟಬೇಕು ಎನ್ನುವುದು ಅವರ ಉದ್ದೇಶ’ ಎಂದು ಆರೋಪಿಸಿದರು.


ಹಗರಣದ ಹಿಂದೆ ಇರುವವರನ್ನು ಪತ್ತೆ ಮಾಡಿ ಶಿಕ್ಷೆ ಕೊಡಲು ಅವರು ಬಂದಿಲ್ಲ. ಈ ಹಗರಣವನ್ನು ಉಪಯೋಗಿಸಿಕೊಂಡು ರಾಜ್ಯದಲ್ಲಿರುವ ಸರ್ಕಾರವನ್ನು ಬುಡಮೇಲು ಮಾಡಬೇಕು ಎನ್ನುವುದೇ ಅವರ ಉದ್ದೇಶ ಎಂದರು.

Join Whatsapp
Exit mobile version