ದೆಹಲಿ ಸಿಎಂ ಕೇಜ್ರಿವಾಲ್ ಗೆ 8ನೇ ಬಾರಿ ಸಮನ್ಸ್ ನೀಡಿದ ಇಡಿ

Prasthutha|

ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯವು ಸತತ 8 ನೇ ಬಾರಿಗೆ ಸಮನ್ಸ್ ನೀಡಿದೆ.

- Advertisement -


7 ನೇ ಬಾರಿಯೂ ವಿಚಾರಣೆಗೆ ಹಾಜರಾಗದ ಹಿನ್ನೆಲೆ ಮತ್ತೆ ಸಮನ್ಸ್ ಜಾರಿ ಮಾಡಲಾಗಿದೆ. ಮಾರ್ಚ್ 4 ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ.


ಪ್ರಕರಣವು ನ್ಯಾಯಾಲಯದ ಮುಂದೆ ವಿಚಾರಣೆಯಲ್ಲಿರುವಾಗ ಹೊಸ ಸಮನ್ಸ್ ನೀಡುವುದು ತಪ್ಪು ಎಂದ ಕೇಜ್ರಿವಾಲ್ ಅವರ ವಾದವನ್ನು ತಿರಸ್ಕರಿಸಿದ ಜಾರಿ ನಿರ್ದೇಶನಾಲಯವು 8ನೇ ಬಾರಿಗೆ ಸಮನ್ಸ್ ಜಾರಿ ಮಾಡಿದೆ.

Join Whatsapp