ಇಂದು ಹಾಜರಾಗುವಂತೆ ಸೋನಿಯಾ ರಾಹುಲ್ ಗೆ ED ಸಮನ್ಸ್ : ದೇಶಾದ್ಯಂತ ಕಾಂಗ್ರೆಸ್ ಪ್ರೆಸ್ ಮೀಟ್ & ಪ್ರೊಟೆಸ್ಟ್

Prasthutha|

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ಇಡಿ ಸಮನ್ಸ್ ನೀಡಿ ಇಂದು ಹಾಜರಾಗುವಂತೆ ನೋಟೀಸ್ ಹೊರಡಿಸಿದರ ವಿರುದ್ಧ ಕಾಂಗ್ರೆಸ್ ಪಕ್ಷ ಇಂದು ದೇಶಾದ್ಯಂತ ಸುದ್ದಿಗೋಷ್ಠಿ ಮತ್ತು ಪ್ರತಿಭಟನೆ ನಡೆಸಲಿದ್ದು ಇದಕ್ಕೆ ಕೈ ನಾಯಕರ ಕಡೆಯಿಂದ ಸಿದ್ಧತೆ ನಡೆಯುತ್ತಿದೆ.

- Advertisement -

ಇಡಿ , ಪಕ್ಷದ ಹೈಕಮಾಂಡ್‌ಗೆ ನಿರಂತರ ನೋಟಿಸ್‌ಗಳನ್ನು ನೀಡುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್ ದೇಶದ ಇಡಿ ಕಚೇರಿಗಳ ಮುಂದೆ ಪ್ರತಿಭಟನೆ ಮತ್ತು ಮೆರವಣಿಗೆಗಳನ್ನು ನಡೆಸಲು ತಯಾರಿ ನಡೆಸುತ್ತಿದೆ. ದೆಹಲಿಯಿಂದ ಉತ್ತರ ಪ್ರದೇಶ ಮತ್ತು ದಕ್ಷಿಣದ ಕೇರಳ ಮತ್ತು ತಮಿಳುನಾಡು, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಸುದ್ದಿಗೋಷ್ಠಿಯ ಜವಾಬ್ದಾರಿಯನ್ನು ಪಕ್ಷದ ಎಲ್ಲಾ ನಾಯಕರಿಗೆ ವಹಿಸಲಾಗಿದೆ. ಈ ವೇಳೆ ಸರ್ಕಾರಿ ಸಂಸ್ಥೆಗಳ ಕ್ರಮಕ್ಕಾಗಿ ಎಲ್ಲಾ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಲಿದ್ದಾರೆ.

ಈ ಸುದ್ದಿಗೋಷ್ಠಿಯ ಜೊತೆಗೆ ಇಂದು ರಾಷ್ಟ್ರವ್ಯಾಪಿ ಕಾಂಗ್ರೆಸ್‌ನ ಬಲ ಪ್ರದರ್ಶನ ನಡೆಯುತ್ತದೆ. ದೆಹಲಿಯಲ್ಲಿ ಹಲವು ಪಕ್ಷದ ಮುಖಂಡರು ರಾಹುಲ್ ಗಾಂಧಿ ಅವರೊಂದಿಗೆ ಇಡಿ ಕಚೇರಿಗೆ ಮೆರವಣಿಗೆ ನಡೆಸಲಿದ್ದಾರೆ ಎನ್ನಲಾಗಿದೆ.

Join Whatsapp