ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ಎಡಪ್ಪಾಡಿ ಪಳನಿಸ್ವಾಮಿ; ಒಪಿಎಸ್ ಬಣಕ್ಕೆ ಹಿನ್ನಡೆ

Prasthutha|

ಚೆನ್ನೈ: ತಮಿಳುನಾಡಿನ ಚೆನ್ನೈನಲ್ಲಿ ಸೋಮವಾರ ನಡೆದ ಎಐಎಡಿಎಂಕೆ ಪಕ್ಷದ ಸಾಮಾನ್ಯ ಸಭೆಯಲ್ಲಿ ಪಕ್ಷದ ಮಧ್ಯಂತರ ಪ್ರಧಾನ ಕಾರ್ಯದರ್ಶಿಯಾಗಿ ಎಡಪ್ಪಾಡಿ ಪಳನಿಸ್ವಾಮಿ ಆಯ್ಕೆಯಾಗಿದ್ದಾರೆ.  

- Advertisement -

  ಎಐಎಡಿಎಂಕೆ ಸಾಮಾನ್ಯ ಮಂಡಳಿ ಸಭೆಗೆ ತಡೆ ನೀಡುವಂತೆ ಮಾಜಿ ಮುಖ್ಯಮಂತ್ರಿ ಒ ಪನ್ನೀರ್ ಸೆಲ್ವಂ ಮಾಡಿದ್ದ ಮನವಿಯನ್ನು ಸೋಮವಾರ ಮದ್ರಾಸ್ ಹೈಕೋರ್ಟ್ ತಿರಸ್ಕರಿಸಿದ ಬೆನ್ನಲ್ಲೇ ಈ ಆಯ್ಕೆಯನ್ನು ಘೋಷಿಸಲಾಗಿದೆ.

ಒಪಿಎಸ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ, ರಾಜಕೀಯ ಪಕ್ಷದ ಜಗಳದಲ್ಲಿ ನ್ಯಾಯಾಲಯವು ಮಧ್ಯಪ್ರವೇಶಿಸುವುದಿಲ್ಲ ಎಂದು ಹೇಳಿ ವಜಾಗೊಳಿಸಿತ್ತು. ಇದರೊಂದಿಗೆ ಪಕ್ಷದ ಪ್ರಧಾನ ಕಾರ್ಯದರ್ಶಿ ಆಯ್ಕೆ ಸುಗಮವಾಗಿ ನಡೆಯಿತು. ಇದರೊಂದಿಗೆ ಎಡಪ್ಪಾಡಿ ಪಳನಿಸ್ವಾಮಿ ಬಣ ಮೇಲುಗೈ ಸಾಧಿಸಿದಂತಾಗಿದೆ.

- Advertisement -

ಇಂದಿನ ಎಐಎಡಿಎಂಕೆ ಸಾಮಾನ್ಯ ಸಭೆಯಲ್ಲಿ ಪೆರಿಯಾರ್, ಎಂಜಿ ರಾಮಚಂದ್ರನ್ (ಎಂಜಿಆರ್), ಜೆ.ಜಯಲಲಿತಾ ಅವರಿಗೆ ಭಾರತ ರತ್ನ ನೀಡಬೇಕು ಎಂದು ಬೇಡಿಕೆಯ ನಿರ್ಣಯವನ್ನು ಅಂಗೀಕರಿಸಲಾಯಿತು.

Join Whatsapp