ಶಿಕ್ಷಣ ಸಚಿವ ಬಿಸಿ ನಾಗೇಶ್, ಜಗದೀಶ್ ಶೆಟ್ಟರ್ ಗೆ ಹಿನ್ನೆಡೆ

Prasthutha|

ತೀವ್ರ ಕುತೂಹಲ ಕೆರಳಿಸಿರುವ ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆಯಲ್ಲಿ ತಮಕೂರು ಜಿಲ್ಲೆಯ ತಿಪಟೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿದ್ದು,  ಸಚಿವ ಬಿಸಿ ನಾಗೇಶ್ ಕಾಂಗ್ರೆಸ್​ನ ಕೆ.ಷಡಕ್ಷರಿ ವಿರುದ್ಧ ಹಿನ್ನಡೆಯನ್ನು ಅನುಭವಿಸಿದ್ದಾರೆ.

- Advertisement -

1999ರಲ್ಲೇ ಶಾಸಕರಾಗಿ ಆಯ್ಕೆಯಾಗಿದ್ದ ಷಡಕ್ಷರಿ, 2008ರಿಂದ ನಾಗೇಶ್ ಅವರೊಂದಿಗೆ ಪೈಪೋಟಿ ಎದುರಿಸುತ್ತಿದ್ದಾರೆ. ಕಳೆದ ಮೂರು ಚುನಾವಣೆಗಳಲ್ಲಿ ಅವರೊಮ್ಮೆ, ಇವರೊಮ್ಮೆ ಜಯ ಸಾಧಿಸಿಕೊಂಡು ಬಂದಿದ್ದಾರೆ. ಈ ಬಾರಿ ಗೆಲ್ಲಲೇಬೇಕೆಂಬ ಜಿದ್ದಿಗೆ ಷಡಕ್ಷರಿ ಬಿದ್ದಿದ್ದಾರೆ. ಪ್ರಾಥಮಿಕ ಶಿಕ್ಷಣ ಸಚಿವರಾಗಿರುವ ಬಿ.ಸಿ ನಾಗೇಶ್ ಹಿಜಾಬ್ ವಿವಾದದಿಂದ ದೇಶಾದ್ಯಂತ ಸುದ್ದಿ ಆಗಿದ್ದರು.

- Advertisement -

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ಹಿನ್ನಡೆ ಅನುಭವಿಸಿದ್ದಾರೆ. ಈ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿರುವ ಮಹೇಶೆ ಟೆಂಗಿನಕಾಯಿ ಮುನ್ನಡೆ ಪಡೆದಿದ್ದಾರೆ.

Join Whatsapp