ವಿದೇಶದಲ್ಲಿ ಅಕ್ರಮ ವಶದಲ್ಲಿರುವ ತೀರ್ಥಹಳ್ಳಿ ಸಾಫ್ಟ್’ವೇರ್ ಎಂಜಿನಿಯರ್ ಬಿಡುಗಡೆಗೆ ಪ್ರಯತ್ನ: ಆರಗ ಜ್ಞಾನೇಂದ್ರ

Prasthutha|

ಬೆಂಗಳೂರು: ಕಾಂಬೋಡಿಯ ದೇಶದಲ್ಲಿ ವಿದೇಶಿ ಅಕ್ರಮ ನೇಮಕಾತಿ ಜಾಲಕ್ಕೆ ಸಿಲುಕಿ ಅಪಾಯದಲ್ಲಿರುವ ತೀರ್ಥಹಳ್ಳಿ ಪಟ್ಟಣದ ಸಾಫ್ಟ್’ವೇರ್ ಇಂಜಿನಿಯರ್ ಕಿರಣ್ ಶೆಟ್ಟಿ ಅವರನ್ನು ಸುರಕ್ಷಿತವಾಗಿ ಕರೆತರುವ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕೇಂದ್ರದ ವಿದೇಶಾಂಗ ಸಚಿವಾಲಯ ಅಧಿಕಾರಿಗಳ ಜತೆ ಸತತ ಪ್ರಯತ್ನ ನಡೆಸಿದ್ದಾರೆ.
ಥೈಲ್ಯಾಂಡ್ ದೇಶದಲ್ಲಿ ಹೆಚ್ಚಿನ ಸಂಬಳ ದೊರಕಿಸಿಕೊಡುವ ಆಮಿಷ ಒಡ್ಡಿದ ನೇಮಕಾತಿ ಏಜೆನ್ಸಿಯಿಂದ ಮೊಸಹೋಗಿ ಕಾಂಬೋಡಿಯಾ ದೇಶದಲ್ಲಿ ಖಾಸಗಿ ಸಂಸ್ಥೆಯೊಂದರ ವಶದಲ್ಲಿರುವ ತೀರ್ಥಹಳ್ಳಿ ನಿವಾಸಿಯ ಬಿಡುಗಡೆ ಬಗ್ಗೆ ಸತತ ಪ್ರಯತ್ನ ನಡೆಸಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹಾಗೂ ವಿದೇಶಾಂಗ ರಾಜ್ಯ ಸಚಿವ ವಿ ಮುರಳೀಧರ್ ಅವರ ಕಚೇರಿ ಜತೆ ಸಂಪರ್ಕಿಸಿ ಬಿಡುಗಡೆ ಕುರಿತು ಮನವಿ ಮಾಡಿದ್ದಾರೆ.
ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳ ಜತೆಗೂ ಟೆಕ್ಕಿಯ ಸುರಕ್ಷಾ ಹಿಂದುವರಿಕೆ ಬಗ್ಗೆ ಸಚಿವರು ಚರ್ಚಿಸಿದ್ದು, ತಮ್ಮ ಎಲ್ಲಾ ಕೈಲಾದ ಪ್ರಯತ್ನ ಮಾಡಲಾಗುತ್ತಿದ್ದು, ಪೋಷಕರು ಧೈರ್ಯ ಗುಂದಬಾರದು ಎಂದು ಸಾಂತ್ವನ ಹೇಳಿದ್ದಾರೆ.
ಸಾಫ್ಟ್’ವೇರ್ ಎಂಜಿನಿಯರ್ ಕಿರಣ್ ಶೆಟ್ಟಿಯವರನ್ನು ದುಷ್ಕರ್ಮಿಗಳಿಂದ ಬಿಡಿಸಿ ಕೊಡುವಂತೆ ಅವರ ಸಹೋದರ ಪವನ್ ಶೆಟ್ಟಿ ತವರು ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಸಂಪರ್ಕಿಸಿ ಮನವಿ ಮಾಡಿದ್ದರು.
ಕಿರಣ್ ಶೆಟ್ಟಿ ತವರಿಗೆ ನಾಲ್ಕು ತಿಂಗಳ ಮಗು ಹಾಗೂ ಪತ್ನಿಯಿದ್ದು ತೀರ್ಥಹಳ್ಳಿಯಲ್ಲಿ ಆತಂಕದಿಂದ ಪತಿಯ ಮರಳಿಕೆ ಬಗ್ಗೆ ಚಿಂತಿತರಾಗಿದ್ದಾರೆ.

Join Whatsapp