ಕೇಜ್ರಿವಾಲ್ ಮನೆಯ ಬಳಿ ದಾಂಧಲೆ, ಧ್ವಂಸ ಪ್ರಕರಣ: ಎಂಟು ಮಂದಿಯ ಬಂಧನ

Prasthutha|

ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಹೊರಗೆ ದಾಂಧಲೆವೆಬ್ಬಿಸಿ ಧ್ವಂಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಎಂಟು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ಗುರುವಾರ ತಿಳಿಸಿದ್ದಾರೆ.

- Advertisement -

ಪ್ರಕರಣದಲ್ಲಿ ಭಾಗಿಯಾಗಿರುವ ಹೆಚ್ಚಿನ ಜನರನ್ನು ಬಂಧಿಸಲು ವಿಶೇಷ ತಂಡಗಳನ್ನು ರಚಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಬುಧವಾರ, ಬಿಜೆಪಿ ಯುವ ಘಟಕದ ಸದಸ್ಯರು, ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ , ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಕುರಿತು ಅವರ ಹೇಳಿಕೆಗಳನ್ನು ವಿರೋಧಿಸಿ ಪ್ರತಿಭಟನೆಯ ಸಂದರ್ಭದಲ್ಲಿ ಅವರ ನಿವಾಸದ ಹೊರಗೆ ಆಸ್ತಿಯನ್ನು ಧ್ವಂಸಗೊಳಿಸಿ ದಾಂಧಲೆವೆಬ್ಬಿಸಿದ್ದರು.

Join Whatsapp