ವಿರಾಜಪೇಟೆ: ರಸ್ತೆ ಅಭಿವೃದ್ಧಿ ಮರೀಚಿಕೆ| ಕೊಳಕೇರಿ, ಕೋಕೇರಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Prasthutha|

ವಿರಾಜಪೇಟೆ: ಕೊಡಗು ಜಿಲ್ಲೆಯ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊಳಕೇರಿ ಮತ್ತು ಕೋಕೇರಿ ಗ್ರಾಮಸ್ಥರು ರಸ್ತೆಯ ದುರಸ್ತಿ ಆಗದೆ ಇರುವುದನ್ನು ವಿರೋಧಿಸಿ ಮುಂದಿನ ಎಲ್ಲಾ ಚುನಾವಣೆಗಳನ್ನು ಬಹಿಷ್ಕರಿಸಲು ನಿರ್ಧರಿಸಿದ್ದು, ಈ ಬಗ್ಗೆ ಬ್ಯಾನರ್ ಅಳವಡಿಸಲಾಗಿದೆ.

- Advertisement -

ಎರಡು ದಶಕಗಳಿಂದ ಡಾಮರು ಕಾಣದ ಹದಗೆಟ್ಟ ರಸ್ತೆ ದುರಸ್ತಿ ಮಾಡದ ಕಾರಣ ಸಮಸ್ಯೆ ಬಗೆ ಹರಿಯುವವರೆಗೂ ಮುಂದಿನ ಎಲ್ಲಾ ಚುನಾವಣೆ ಬಹಿಷ್ಕರಿಸುವುದಾಗಿ ಗ್ರಾಮಸ್ಥರು ನಿರ್ಧರಿಸಿದ್ದಾರೆ.

‘ಗ್ರಾಮದ ರಸ್ತೆ ಹಾಳು ಬಿದ್ದಿದ್ದು ಜನಪ್ರತಿನಿಧಿಗಳಿಗೆ ಎಷ್ಟೇ ಮನವಿ ನೀಡಿದರೂ ಅನುದಾನ ಕಲ್ಪಿಸದೆ ಕೇವಲ ಭರವಸೆಯನ್ನು ಮಾತ್ರ ನೀಡುತ್ತಾ ಬಂದಿದ್ದಾರೆ. ಈ ಕಾರಣದಿಂದ ಚುನಾವಣೆಯ ಬಹಿಷ್ಕಾರ ತೀರ್ಮಾನ ತೆಗೆದುಕೊಂಡಿದ್ದೇವೆ’ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

- Advertisement -

ರಸ್ತೆ ಅಭಿವೃದ್ಧಿಯಾಗದಿದ್ದರೆ ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಮತದಾನ ಬಹಿಷ್ಕಾರ ನಿರ್ಧಾರ ಮಾಡಲಾಗುವುದು ಎಂದು ಬ್ಯಾನರ್ ಅಳವಡಿಸುವುದರ ಜತೆಗೆ ಜಾಲತಾಣದಲ್ಲಿಯೂ ಪೋಸ್ಟರ್ ವೈರಲ್ ಆಗಿದೆ.

Join Whatsapp