ಚುನಾವಣಾ ಪ್ರಚಾರ: ಅಮಿತ್ ಶಾ ರಥಕ್ಕೆ ಕರೆಂಟ್ ಶಾಕ್..!

Prasthutha|

ಜೈಪುರ: ರಾಜಸ್ಥಾನದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ಅಪಾಯವೊಂದರಿಂದ ಸ್ವಲ್ಪದರಲ್ಲಿ ಪಾರಾಗಿದ್ದಾರೆ. ಅವರು ಸಂಚರಿಸುತ್ತಿದ್ದ ʼರಥʼಕ್ಕೆ ವಿದ್ಯುತ್ ಕೇಬಲ್ ತಗುಲಿ ಕಿಡಿಗಳು ಹಾರಿದ ಘಟನೆ ನಡೆದಿದೆ.

- Advertisement -

ಮಂಗಳವಾರ ರಾಜಸ್ಥಾನದ ನಾಗೌರ್ನಲ್ಲಿ ಅಮಿತ್ ಶಾ ರಥದಲ್ಲಿ ನಿಂತು ಪಕ್ಷದ ಪರ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ವಿಶೇಷವಾಗಿ ವಿನ್ಯಾಸ ಮಾಡಲಾಗಿರುವ ರಥದ ಮೇಲಿನ ಭಾಗ ವಿದ್ಯುತ್ ತಂತಿಗೆ ಸ್ಪರ್ಶಿಸಿದೆ. ರಥ ತಾಗಿದ ಕೂಡಲೇ ಕಿಡಿ ಹೊತ್ತಿಕೊಂಡಿದೆ. ಕೂಡಲೇ ರಥದ ಹಿಂದೆ ಇದ್ದ ಇತರ ವಾಹನಗಳನ್ನು ತಕ್ಷಣವೇ ನಿಲ್ಲಿಸಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಯಿತು.
ಪರ್ಬತ್ ಸರ್ ನಲ್ಲಿ ಎರಡೂ ಬದಿಗಳಲ್ಲಿ ಅಂಗಡಿಗಳು ಮತ್ತು ಮನೆಗಳಿರುವ ಸಾಲಿನಲ್ಲಿ ಸಂಚರಿಸುತ್ತಿದ್ದಾಗ ಈ ಘಟನೆ ನಡೆದಿದೆ.



Join Whatsapp