ರಾಷ್ಟ್ರಪತಿ ಚುನಾವಣೆ | ಚುನಾವಣಾ ಆಯೋಗದಿಂದ ಇಂದು ವೇಳಾಪಟ್ಟಿ ಪ್ರಕಟ

Prasthutha|

ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದಂತೆ ಭಾರತೀಯ ಚುನಾವಣಾ ಆಯೋಗ ಇಂದು ವೇಳಾಪಟ್ಟಿಯನ್ನು ಪ್ರಕಟಿಸಲಿದೆ.

- Advertisement -

ಇದಕ್ಕೆ ಸಂಬಂಧಿಸಿದಂತೆ ಅಪರಾಹ್ನ 3 ಗಂಟೆಗೆ ಸರಿಯಾಗಿ ಪತ್ರಿಕಾಗೋಷ್ಠಿಯನ್ನು ಆಯೋಜಿಸಿದೆ.

ಹಾಲಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅವಧಿ ಜುಲೈ 24ಕ್ಕೆ ಕೊನೆಗೊಳ್ಳಲಿದ್ದು, ಅದಕ್ಕಿಂತ ಮೊದಲು ಮುಂದಿನ ರಾಷ್ಟ್ರಪತಿ ಆಯ್ಕೆಗೆ ಚುನಾವಣೆ ನಡೆಸಬೇಕಾಗಿದೆ.

- Advertisement -

ಸಂಸತ್ತಿನ ಉಭಯ ಸದನಗಳ ಚುನಾಯಿತ ಸದಸ್ಯರು, ಚುನಾವಣಾ ಕಾಲೇಜಿನ ಸದಸ್ಯರು ಮತ್ತು ಕೇಂದ್ರಾಡಳಿತ ಒಳಗೊಂಡಂತೆ ಎಲ್ಲಾ ರಾಜ್ಯಗಳ ಶಾಸಕಾಂಗ ಸಭೆಗಳ ಚುನಾಯಿತ ಸದಸ್ಯರು ರಾಷ್ಟ್ರಪತಿಗಳನ್ನು ಆಯ್ಕೆ ಮಾಡುತ್ತಾರೆ.



Join Whatsapp