ಉ.ಪ್ರ. ಸಿಎಂ ಆದಿತ್ಯನಾಥ್‌ ಸರಕಾರದ ಮಾಜಿ ಮುಖ್ಯ ಕಾರ್ಯದರ್ಶಿ ಅನೂಪ್‌ ಚಂದ್ರ ಪಾಂಡೆ ಚುನಾವಣಾ ಆಯುಕ್ತರಾಗಿ ನೇಮಕ

Prasthutha|

ನವದೆಹಲಿ : ಉತ್ತರ ಪ್ರದೇಶ ಸಿಎಂ ಆದಿತ್ಯನಾಥ್‌ ಅವರ ಸರಕಾರದಲ್ಲಿ ಮುಖ್ಯ ಕಾರ್ಯದರ್ಶಿಯಾಗಿದ್ದ ನಿವೃತ್ತ ಐಎಎಸ್‌ ಅಧಿಕಾರಿ ಅನೂಪ್‌ ಚಂದ್ರ ಪಾಂಡೆ ಅವರನ್ನು ಭಾರತೀಯ ಚುನಾವಣಾ ಆಯೋಗದ ಚುನಾವಣಾ ಆಯುಕ್ತರನ್ನಾಗಿ ಕೇಂದ್ರ ಸರಕಾರ ಆಯ್ಕೆ ಮಾಡಿದೆ. ಚುನಾವಣಾ ಆಯೋಗದ ಚುನಾವಣಾ ಸಮಿತಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಸುಶೀಲ್‌ ಚಂದ್ರ ಮತ್ತು ಇನ್ನೋರ್ವ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ಜೊತೆಗೆ ಈಗ ಅನೂಪ್‌ ಚಂದ್ರ ಜೊತೆಗೂಡಲಿದ್ದಾರೆ. ಕಳೆದ ಏಪ್ರಿಲ್‌ ನಲ್ಲಿ ಮುಖ್ಯ ಚುನಾವಣಾ ಆಯುಕ್ತ ಸುನೀಲ್‌ ಅರೋರ ಅವರಿಂದ ರವಾದ ಸ್ಥಾನಕ್ಕೆ ಪಾಂಡೆ ಸೇರ್ಪಡೆಗೊಂಡಿದ್ದಾರೆ.

- Advertisement -

2019ರ ಲೋಕಸಭಾ ಚುನಾವಣೆಗೂ ಮುನ್ನಾ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್‌ ತಮ್ಮ ರಾಜ್ಯ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಪಾಂಡೆ ಅವರನ್ನು ಆಯ್ಕೆ ಮಾಡಿದ್ದರು. ಆದಿತ್ಯನಾಥ್‌ ಅವರು ಅಧಿಕಾರಿಯಾಗಿ ಪಾಂಡೆ ಗಮನ ಸೆಳೆದಿದ್ದಾರೆ.

ತಮ್ಮ ಸರಕಾರದ ಹಲವು ಪ್ರಮುಖ ಯೋಜನೆಗಳನ್ನು ಜಾರಿಮಾಡುವ ನಿಟ್ಟಿನಲ್ಲಿ ಸಹಕರಿಸಿದ ಹಿರಿಯ ಮುಂದಿನ ವರ್ಷ ಉತ್ತರ ಪ್ರದೇಶ ಸಹಿತ ಹಲವು ರಾಜ್ಯಗಳ ಚುನಾವಣೆ ನಡುವೆ ಪಾಂಡೆ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ. ಪಾಂಡೆ 2019ರಲ್ಲಿ ನಾಗರಿಕ ಸೇವೆಯಿಂದ ನಿವೃತ್ತರಾಗಿದ್ದರು.

Join Whatsapp