ಅಗ್ನಿಪಥ್ ಯೋಜನೆ ರಾಜಕೀಯಗೊಳಿಸದಂತೆ ಕಾಂಗ್ರೆಸ್ ಗೆ ಚುನಾವಣಾ ಆಯೋಗದ ನಿರ್ದೇಶನ ತಪ್ಪು: ಚಿದಂಬರಂ

Prasthutha|

ನವದೆಹಲಿ: ಅಗ್ನಿಪಥ್ ಯೋಜನೆಯಲ್ಲಿ ರಾಜಕೀಯ ಮಾಡದಂತೆ ಚುನಾವಣಾ ಆಯೋಗವು ತಮ್ಮ ಪಕ್ಷಕ್ಕೆ ನಿರ್ದೇಶನ ನೀಡಿರುವುದು ಅತ್ಯಂತ ತಪ್ಪು. ಸರ್ಕಾರದ ನೀತಿಯನ್ನು ಟೀಕಿಸುವುದು ವಿರೋಧ ಪಕ್ಷದ ಹಕ್ಕು ಎಂದು ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಹೇಳಿದ್ದಾರೆ.

- Advertisement -


ಚುನಾವಣಾ ಆಯೋಗವು ಬುಧವಾರ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ಅನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದು, ಜಾತಿ, ಸಮುದಾಯ, ಭಾಷೆ ಮತ್ತು ಧರ್ಮದ ಆಧಾರದ ಮೇಲೆ ಪ್ರಚಾರ ಮಾಡುವುದನ್ನು ನಿಲ್ಲಿಸುವಂತೆ ಸೂಚಿಸಿತ್ತು.


ರಕ್ಷಣಾ ಪಡೆಗಳನ್ನು ರಾಜಕೀಯಗೊಳಿಸದಂತೆ ಮತ್ತು ಸಶಸ್ತ್ರ ಪಡೆಗಳ ಸಾಮಾಜಿಕ-ಆರ್ಥಿಕ ಸಂಯೋಜನೆಯ ಬಗ್ಗೆ ಸಂಭಾವ್ಯ ವಿಭಜಕ ಹೇಳಿಕೆಗಳನ್ನು ನೀಡದಂತೆ ಚುನಾವಣಾ ಆಯೋಗ ಕಾಂಗ್ರೆಸ್ ಗೆ ಕೇಳಿಕೊಂಡಿದೆ. ಅಲ್ಲದೆ ಅಗ್ನಿಪಥ್ ಯೋಜನೆ ಕುರಿತು ಕಾಂಗ್ರೆಸ್ ಉನ್ನತ ನಾಯಕರು ಮಾಡಿದ ಟೀಕೆಗಳನ್ನು ಆಯೋಗ ಉಲ್ಲೇಖಿಸಿದೆ.

Join Whatsapp