ಈದ್ ಮಿಲಾದ್ ರ‍್ಯಾಲಿ ವೇಳೆ ವಿದ್ಯುತ್ ಸ್ಪರ್ಶ: ಐವರು ಬಲಿ; ಹಲವರು ಗಂಭೀರ

Prasthutha|

ಬಹ್ರೈಚ್ (ಉತ್ತರ ಪ್ರದೇಶ): ಈದ್ ಮಿಲಾದ್ ರ‍್ಯಾಲಿ ವೇಳೆ ಹೈ ಟೆನ್ಷನ್ ವಿದ್ಯುತ್ ತಂತಿ ಸ್ಪರ್ಶಿಸಿ ಐವರು ಮೃತಪಟ್ಟ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಬಹ್ರೈಚ್ ಎಂಬಲ್ಲಿ ನಡೆದಿದೆ. ಈ ದುರ್ಘಟನೆಯಲ್ಲಿ ಮೂವರು ಮಕ್ಕಳು ಸೇರಿದಂತೆ ಐದು ಮಂದಿ ಗಂಭೀರವಾದ ಸುಟ್ಟ ಗಾಯಗಳೊಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಉತ್ತರ ಪ್ರದೇಶದ ನನ್ಪಾರ ಪ್ರದೇಶದ ಮಸುಪುರ್ ಗ್ರಾಮದಲ್ಲಿ ಭಾನುವಾರ ಮುಂಜಾನೆ ಸುಮಾರು 4 ಗಂಟೆಗೆ ಈ ದುರ್ಘಟನೆ ನಡೆದಿದ್ದು, ಗ್ರಾಮಸ್ಥರು ಮೆರವಣಿಗೆ ನಡೆಸುತ್ತಿದ್ದಾಗ ಗಾಡಿಯಲ್ಲಿ ಇರಿಸಲಾಗಿದ್ದ ಕಬ್ಬಿಣದ ರಾಡ್ ಹೈ ಟೆನ್ಷನ್ ವಿದ್ಯುತ್ ತಂತಿಗೆ ತಗುಲಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಈ ದುರ್ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ, ಒಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಗ್ರಾಮಾಂತರ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

- Advertisement -

ಗಾಯಾಳುಗಳ ಪೈಕಿ ಒಬ್ಬನ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಅವರು ತಿಳಿಸಿದ್ದಾರೆ.

ಘಟನೆಯ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಆದಿತ್ಯನಾಥ್, ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ ಮತ್ತು ಗಾಯಾಳುಗಳಿಗೆ ಉತ್ತಮವಾದ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Join Whatsapp