Home ಕರಾವಳಿ ವಿದ್ಯುದಾಘಾತ: ಮೆಸ್ಕಾಂ ಪವರ್ ಮ್ಯಾನ್ ಮೃತ್ಯು

ವಿದ್ಯುದಾಘಾತ: ಮೆಸ್ಕಾಂ ಪವರ್ ಮ್ಯಾನ್ ಮೃತ್ಯು

ಪುತ್ತೂರು: ಮರದ ಗೆಲ್ಲು ಕಡಿಯುವ ವೇಳೆ ವಿದ್ಯುತ್ ಹರಿದು ಮೆಸ್ಕಾಂ ಪವರ್ ಮ್ಯಾನ್ ಒಬ್ಬರು ಮೃತಪಟ್ಟ ದಾರುಣ ಘಟನೆ ಕುಂಬ್ರ ಸಮೀಪದ ಪರ್ಪುಂಜದಲ್ಲಿ ಇಂದು ಮಧ್ಯಾಹ್ನ ನಡೆದಿದೆ.

ಮೃತಪಟ್ಟವರು ಮೆಸ್ಕಾಂ ಕುಂಬ್ರ ಶಾಖೆಯ ಪವರ್ ಮ್ಯಾನ್ ಬಸವರಾಜ್ (26) ಎಂದು ಗುರುತಿಸಲಾಗಿದೆ. ಇವರು ಮೂಲತಃ ಬಾಗಲಕೋಟೆ ನಿವಾಸಿಯಾಗಿದ್ದಾರೆ. ಕೆಲವು ಸಮಯಗಳಿಂದ ಇವರು ಮೆಸ್ಕಾಂನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.

ಭಾರೀ ಗಾಳಿ ಮಳೆಯ ಹಿನ್ನೆಲೆಯಲ್ಲಿ ವಿದ್ಯುತ್ ತಂತಿಗೆ ತಗುಲಿರುವ ಮರದ ರೆಂಬೆ ಕೊಂಬೆಗಳನ್ನು ಕತ್ತರಿಸುವಾಗ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.

ಕಠಿಣ ಕ್ರಮಕ್ಕೆ ಎಸ್ ಡಿಪಿಐ ಒತ್ತಾಯ

ಪುತ್ತೂರು ತಾಲೂಕಿನ ಕುಂಬ್ರದ ಪರ್ಪುಂಜದಲ್ಲಿ ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯದಿಂದ ಕರ್ತವ್ಯನಿರತ ಬಾಗಲಕೋಟೆ ಮೂಲದ ಬಸವರಾಜ್ ಎಂಬ ನೌಕರ ವಿದ್ಯುತ್ ಶಾಕ್ ನಿಂದ ಬಲಿಯಾಗಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಮೃತ ಬಸವರಾಜ್ ಕುಟುಂಬಕ್ಕೆ ಶೀಘ್ರ ಪರಿಹಾರ ಒದಗಿಸಬೇಕು ಎಂದು  ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಒಳಮೊಗ್ರು ಗ್ರಾಮ ಸಮಿತಿ ಅಧ್ಯಕ್ಷ  ಅಶ್ರಫ್ ಒಳಮೊಗ್ರು ಆಗ್ರಹಿಸಿದ್ದಾರೆ.

Join Whatsapp
Exit mobile version