ಹುಟ್ಟು ಹಬ್ಬಕ್ಕೆ ಕೇಕ್ ಕತ್ತರಿಸುತ್ತಿದ್ದಾಗ ವಿದ್ಯುತ್ ಸ್ಪರ್ಶ: ಬಾಲಕಿ ಸಾವು

Prasthutha|

ಚಾಮರಾಜನಗರ: ಹುಟ್ಟು ಹಬ್ಬದ ಸಂಭ್ರಮಾಚರಣೆ ವೇಳೆ ಕೇಕ್ ಕತ್ತರಿಸುತ್ತಿದ್ದಾಗ ಟೇಬಲ್ ಗೆ ಸಂಪರ್ಕ ಕಲ್ಪಿಸಿದ್ದ ವೈರ್ ನಿಂದ ವಿದ್ಯುತ್ ತಗುಲಿ ಬಾಲಕಿ ಸ್ಥಳದಲ್ಲೇ ಮೃತಪಟ್ಟ ಘಟನೆ ಚಾಮರಾಜನಗರ ತಾಲ್ಲೂಕಿನ ಕೆಂಗಾಕಿ ಗ್ರಾಮದಲ್ಲಿ ನಡೆದಿದೆ.

- Advertisement -


ಗ್ರಾಮದ ಸಿದ್ದಲಿಂಗಸ್ವಾಮಿ ಅವರ ಪುತ್ರಿ ನಿವೇದಿತಾ(3) ಮೃತಪಟ್ಟ ಬಾಲಕಿ.


ಈ ಬಗ್ಗೆ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp