ಆನೆ ದಾಳಿ ಭೀತಿ: ಒಟ್ಟಿಗೇ ಮಲಗಿದ್ದ 3 ಮಕ್ಕಳು ಹಾವಿನ ಕಡಿತದಿಂದ ಮೃತ್ಯು

Prasthutha|

ರಾಂಚಿ: ಆನೆ ದಾಳಿ ಭಯದಿಂದ ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತದಿಂದ ಸಾವನ್ನಪ್ಪಿರುವ ಘಟನೆ ಜಾರ್ಖಂಡ್ ನಡೆದಿದೆ.

- Advertisement -


ಜಾರ್ಖಂಡ್ ನ ಗರ್ವಾ ಜಿಲ್ಲೆಯ ಚಪ್ಕಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ‘ಆನೆ ದಾಳಿಗೆ ಹೆದರಿ ಒಂದೇ ಕುಟುಂಬದ ಸುಮಾರು 8 ರಿಂದ 10 ಮಕ್ಕಳು ತಮ್ಮ ಹೆಂಚಿನ ಮನೆಯ ನೆಲದ ಮೇಲೆ ಮಲಗಿದ್ದರು. ಈ ವೇಳೆ ಮಧ್ಯರಾತ್ರಿ ಪಕ್ಕದ ಹೊಲದಿಂದ ವಿಷಕಾರಿ ಹಾವೊಂದು ಆಹಾರ ಅರಸುತ್ತ ಮನೆಯೊಳಗೆ ಬಂದಿದ್ದು, ಈ ವೇಳೆ ಮೂವರು ಮಕ್ಕಳನ್ನು ಕಚ್ಚಿದೆ.


ಹಾವಿನ ಕಡಿತದ ಬಳಿಕ ಮಕ್ಕಳು ಅಳಲು ಆರಂಭಿಸಿದ್ದು ಈ ವೇಳೆ ಮಕ್ಕಳು ಹಾವಿನ ಕಡಿತ ಮನಗಂಡು ಕೂಡಲೇ ಹಳ್ಳಿಯಲ್ಲಿದ್ದ ಮಾಂತ್ರಿಕನ ಬಳಿಗೆ ಚಿಕಿತ್ಸೆಗೆ ಕರೆದೊಯ್ದಿದ್ದಾರೆ. ಆದರೆ ಅಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಈ ವೇಳೆ ಹಾವಿನ ಕಡಿತಕ್ಕೊಳಗಾಗಿದ್ದ ಹೆಣ್ಣು ಮಗುವನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಆಕೆ ಕೂಡ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ.

- Advertisement -


ಮೃತ ಮಕ್ಕಳನ್ನು ಪನ್ನಾಲಾಲ್ ಕೊರ್ವಾ (15), ಕಾಂಚನ್ ಕುಮಾರಿ (8), ಮತ್ತು ಬೇಬಿ ಕುಮಾರಿ (9) ಎಂದು ಗುರುತಿಸಲಾಗಿದೆ ಎಂದು ಚಿನಿಯಾ ಪೊಲೀಸ್ ಠಾಣೆಯ ಪ್ರಭಾರ ಅಧಿಕಾರಿ ನೀರಜ್ ಕುಮಾರ್ ತಿಳಿಸಿದ್ದಾರೆ.


ಇನ್ನು ಈ ಪ್ರಾಂತ್ಯದಲ್ಲಿ ಕಳೆದೊಂದು ತಿಂಗಳಿಂದ ಆನೆಗಳ ಹಾವಳಿ ತೀವ್ರವಾಗಿತ್ತು. ಹೀಗಾಗಿ ಇಲ್ಲಿನ ಸ್ಥಳೀಯ ಅರಣ್ಯಾಧಿಕಾರಿಗಳು ಗ್ರಾಮಸ್ಥರನ್ನು ಒಟ್ಟಿಗೇ ಇರಲು ಸೂಚಿಸಿದ್ದರು. ಒಟ್ಟಿಗೇ ಇದ್ದರೆ ಆನೆಗಳು ದಾಳಿ ಮಾಡಲು ಹಿಂದೇಟು ಹಾಕುತ್ತವೆ ಎಂಬ ಕಾರಣಕ್ಕೆ ಈ ರೀತಿ ಸೂಚನೆ ನೀಡಿದ್ದರು.


ಅಧಿಕಾರಿಗಳ ಸೂಚನೆ ಮೇರೆಗೆ ಇಲ್ಲಿನ ಗ್ರಾಮಸ್ಥರು ಸುರಕ್ಷಿತ ಸ್ಥಳಗಳಲ್ಲಿ ಮಲಗುತ್ತಿದ್ದರು. ಕೆಲ ಗ್ರಾಮಸ್ಥರು ಶಾಲಾ ಕಟ್ಟಡಗಳ ಛಾವಣಿಯ ಮೇಲೆ ಅಥವಾ ಗ್ರಾಮದಲ್ಲಿ ಒಂದೇ ಸ್ಥಳದಲ್ಲಿ ಗುಂಪುಗಳಾಗಿ ಮಲಗುತ್ತಿದ್ದರು.




Join Whatsapp