ಅರೆಹಳ್ಳಿ | ಕಾಡಾನೆ ದಾಳಿಗೆ ಇಬ್ಬರು ಕಾರ್ಮಿಕರು ಬಲಿ

Prasthutha|

ಅರೇಹಳ್ಳಿ: ಹಾಸನ ಜಿಲ್ಲೆ ಬೇಲೂರು ತಾಲೂಕು ಅರೆಹಳ್ಳಿ ಕಡೆಗರ್ಜೆ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಮೃತ ಕಾರ್ಮಿಕರನ್ನು ಚಿಕ್ಕಯ್ಯ(65) ಚಿಕ್ಕಯ್ಯ(68) ಎಂದು ಗುರುತಿಸಲಾಗಿದೆ. ಇಂದು ಬೆಳಗಿನ ಜಾವ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರಿಬ್ಬರ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

- Advertisement -

ಕಾರ್ಮಿಕರಿಬ್ಬರ ಸಾವಿನ ಕುರಿತು ಆಕ್ರೋಶಗೊಂಡ ಸ್ಥಳೀಯರು ಗ್ರಾಮದ ರಸ್ತೆ ತಡೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಈ ಸಂಬಂಧ ಅರೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp