ಕಡಬ: ಆನೆ ದಾಳಿಗೆ ಇಬ್ಬರು ಬಲಿ

Prasthutha|

ಮಂಗಳೂರು: ಆನೆ ದಾಳಿ ಮಾಡಿ ಇಬ್ಬರನ್ನು ಬಲಿ ತೆಗೆದುಕೊಂಡ ಘಟನೆ ಕಡಬದ ಕುಟ್ರುಪಾಡಿ ಸಮೀಪದ ಮೀನಾಡಿಯಲ್ಲಿ ನಡೆದಿದೆ.

- Advertisement -

ಆನೆ ದಾಳಿಯಿಂದ ಮೃತಪಟ್ಟವರನ್ನು ರಮೇಶ್ ಮತ್ತು ರಂಜಿತಾ ಎಂದು ಗುರುತಿಸಲಾಗಿದೆ.

ಪೇರಡ್ಕ ಹಾಲು ಸೊಸೈಟಿಯ ಸಿಬ್ಬಂದಿಯಾಗಿರುವ ರಂಜಿತಾ ಸೊಸೈಟಿಗೆ ತೆರಳುತ್ತಿದ್ದಾಗ ಅವರ ಮೇಲೆ ಆನೆ ದಾಳಿ ನಡೆಸಿದ್ದು, ಸ್ಥಳದಲ್ಲಿದ್ದ ರಮೇಶ್ ಎಂಬವರನ್ನೂ ದಾಳಿ ನಡೆಸಿ ಕೊಂದು ಹಾಕಿದೆ.

- Advertisement -

ಗಂಭೀರಾವಸ್ಥೆಯಲ್ಲಿದ್ದ ರಂಜಿತಾ ಅವರನ್ನು ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಕಾಡಾನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡ ರಂಜಿತಾ ನೆಲ್ಯಾಡಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೇ ಆಕೆ ಕೆಲವೇ ನಿಮಿಷಗಳಲ್ಲಿ  ಸಾವನ್ನಪ್ಪಿದ್ದಾರೆ.

ಕಡಬ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಕಳೆದ ಹಲವು ದಿನಗಳಿಂದ ಕಾಡಾನೆ ಉಪಟಳದಿಂದ ಬೇಸತ್ತಿರುವ ಸ್ಥಳೀಯರು, ಅರಣ್ಯ ಇಲಾಖೆಯ ಗಮನಕ್ಕೆ ತಂದಿದ್ದರು ಆದರೆ ಅಧಿಕಾರಿಗಳು ಮಾತ್ರ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ದ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.



Join Whatsapp