ಆನೆಗೆ ಬೆಂಕಿ ಇಟ್ಟ ದುಷ್ಕರ್ಮಿಗಳು! : ಸುಟ್ಟ ನೋವು ತಾಳಲಾರದೆ ಆನೆ ಸಾವು

Prasthutha|

ಊಟಿ : ಕಾಡು ಪ್ರದೇಶದಲ್ಲಿ ಎಸ್ಟೇಟ್ ಒಂದರ ಒಳಗೆ ಬರಲು ಪ್ರಯತ್ನಿಸಿದ ಆನೆಗೆ ಇಬ್ಬರು ದುಷ್ಕರ್ಮಿಗಳು ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ತಮಿಳುನಾಡಿನ ಮಸಿನಗುಡಿ ಕಾಡು ಪ್ರದೇಶದಲ್ಲಿ ಈ ದುಷ್ಕೃತ್ಯ ಎಸಗಲಾಗಿದೆ.

- Advertisement -

ಜ.19ರಂದು ಎಸ್ಟೇಟ್ ಒಂದರ ಒಳಗೆ ಬರಲು ಪ್ರಯತ್ನಿಸಿದೆ. ಈ ಸಮಯ ಎಸ್ಟೇಟ್ ಕಾವಲು ಕಾಯುತ್ತಿದ್ದ ರೈಮಾನ್ ಮತ್ತು ಪ್ರಶಾಂತ್ ಎಂಬವರು ಒಂದು ಟಯರ್ ಗೆ ಬೆಂಕಿ ಹಚ್ಚಿ ಅದನ್ನು ಆನೆಯ ಮೇಲೆ ಎಸೆದಿದ್ದಾರೆ. ಬೆಂಕಿ ಹೊತ್ತಿ ಉರಿಯುತ್ತಿದ್ದ ಟಯರ್ ಅನ್ನು ಹೊತ್ತ ಆನೆ ನೋವಿನಿಂದ ಕೂಗಿಕೊಳ್ಳುತ್ತ ಸ್ವಲ್ಪ ದೂರ ಹೋಗಿದೆ. ಆನೆಯ ಕಿವಿ ಮತ್ತು ಹಿಂಭಾಗದಲ್ಲಿ ಸುಟ್ಟ ಗಾಯಗಳಾಗಿವೆ.

ಅಸ್ವಸ್ಥವಾಗಿದ್ದ ಆನೆಯನ್ನು ಅರಣ್ಯ ಸಿಬ್ಬಂದಿ ಕಂಡಿದ್ದು, ವೈದ್ಯಕೀಯ ಚಿಕಿತ್ಸೆಗೆಂದು ಕರೆದೊಯ್ಯಲಾಗಿದೆ. ಆದರೆ ಆದಾಗಲೇ ಸುಟ್ಟ ಗಾಯದಿಂದ ಸಾಕಷ್ಟು ನೋವುಂಡಿದ್ದ ಆನೆ ಕೊನೆಯುಸಿರೆಳೆದಿದೆ. ಈ ಸಂಬಂಧ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಶಾಂತ್ ಮತ್ತು ರೈಮಾನ್ ನನ್ನು ಬಂಧಿಸಲಾಗಿದೆ.  

Join Whatsapp