ನೇಹಾ ಕೊಲೆ ಪ್ರಕರಣ | ಎನ್ ಕೌಂಟರ್ ಕಾನೂನು ಜಾರಿಯಾಗಬೇಕು: ಸಚಿವ ಸಂತೋಷ್ ಲಾಡ್

Prasthutha|

ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಅತ್ಯಂತ ಖಂಡನೀಯವಾಗಿದ್ದು, ಇಂತಹ ಪ್ರಕರಣದ ಆರೋಪಿಗೆ ಎನ್’ಕೌಂಟರ್ ಕಾನೂನು ಜಾರಿಗೆ ಬರಲೇಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

- Advertisement -


ನಗರದ ಕಿಮ್ಸ್ ಶವಗಾರಕ್ಕೆ ಭೇಟಿ ನೀಡಿದ ಅವರು, ಕುಟುಂಬದವರಿಗೆ ಸಾಂತ್ವನ ನೀಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.


ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಹಲವು ಮುಖಂಡರು ಈಗಾಗಲೇ ಮಾತನಾಡಿದ್ದಾರೆ. ಆ ಕುರಿತು ನಾನು ಹೆಚ್ವಿಗೆ ಹೇಳುವುದಿಲ್ಲ. ಆದರೆ, ಇಂತಹ ಪ್ರಕರಣಗಳಿಗೆ ಮುಂದೊಂದು ದಿನ ಎನ’ಕೌಂಟರ್ ಕಾನೂನು ಬರಲೇಬೇಕು. ಇದು ಜಾರಿಯಾದರೆ, ಇಂತಹ ಪ್ರಕರಣದ ಆರೋಪಿಗಳನ್ನು ಹೊಡೆದುರುಳಿಸಬಹುದು’ ಎಂದು ಅಭಿಪ್ರಾಯಪಟ್ಟರು.

Join Whatsapp