ಡ್ರೈವಿಂಗ್ ನಲ್ಲಿ ಹೃದಯಾಘಾತ: ಇಂಜಿನಿಯರ್ ಸ್ಥಳದಲ್ಲೇ ಸಾವು

Prasthutha|

ಧಾರವಾಡ: ಯುವಕನೋರ್ವ  ಕಾರು ಚಲಾಯಿಸುತ್ತಿರುವಾಗಲೇ ಹೃದಯಾಘಾತದಿಂದ ‌ಮೃತಪಟ್ಟ ದಾರುಣ ಘಟನೆ‌ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಕರ್ಲವಾಡದಲ್ಲಿ ನಡೆದಿದೆ.

- Advertisement -

ಧಾರವಾಡ ಜಿಪಂ ಇಂಜಿನಿಯರ್ ಆಗಿದ್ದ ನವಲಗುಂದ ತಾಲೂಕಿನ ಲೋಕನಾಥ (29) ಎಂಬವರು ಹುಬ್ಬಳ್ಳಿಯಿಂದ ನವಲಗುಂದಗೆ ಕರ್ತವ್ಯಕ್ಕೆ ತೆರಳುತ್ತಿದ್ದಾಗ ಹೃದಯಾಘಾತಕ್ಕೊಳಗಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನೆಯಿಂದ ಕಾರು ತೋಟಕ್ಕೆ ನುಗ್ಗಿ ನಿಂತಿದೆ.

ಈ ಬಗ್ಗೆ ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Join Whatsapp