ದುಡಿಯುವ ವರ್ಗಕ್ಕೆ ಪರಿಹಾರ ನೀಡಲು ನಾವೇನು ದುಡ್ಡು ಪ್ರಿಂಟ್ ಮಾಡ್ತೀವಾ?: ಸಚಿವ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ

Prasthutha|

ಶಿವಮೊಗ್ಗ: ದುಡಿಯುವ ವರ್ಗಕ್ಕೆ 10 ಸಾವಿರ ರೂ. ಪರಹಾರ ನೀಡಬೇಕೆಂಬ ವಿಪಕ್ಷಗಳ ಬೇಡಿಕೆಗೆ ಗರಂ ಆದ ಸಚಿವ ಕೆ.ಎಸ್.ಈಶ್ವರಪ್ಪ ನಾವೇನು ದುಡ್ಡು ಪ್ರಿಂಟ್ ಮಾಡ್ತೀವಾ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

- Advertisement -

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ, ಡಿಕೆಶಿ, ಕುಮಾರಸ್ವಾಮಿ ಬಾಯಿಗೆ ಬೀಗ ಹಾಕಿಕೊಂಡರೆ ಲಾಕ್‌ಡೌನ್ ಯಶಸ್ವಿಯಾಗುತ್ತದೆ. ಅವರು 14 ದಿನ ಬಾಯಿಗೆ ಬೀಗ ಹಾಕಿಕೊಳ್ಳಬೇಕು. ಅದಾದ ಮೇಲೆ ನಾವು, ನೀವು ಯಾವ ಭಾಷೆಯಲ್ಲಿ ಬೇಕಾದರೂ ಮಾತನಾಡಿಕೊಳ್ಳೋಣ ಎಂದರು.

ರಾಜ್ಯದ ಜನ ಸಾಯುತ್ತಿದ್ದಾರೆ ಇಂತಹ ವೇಳೆ ಬಾಯಿಗೆ ಬಂದ ಹಾಗೆ ಟೀಕೆ ಮಾಡುತ್ತಿದ್ದಾರೆ. ಒಳ್ಳೆಯದಕ್ಕೆ ಎಂದಾದರೂ ಅಭಿನಂದನೆ ಸಲ್ಲಿಸಿದ್ದೀರಾ? ಟೀಕೆ ಮಾಡುವುದಕ್ಕೆ ವಿರೋಧ ಪಕ್ಷ ಇದೆ ಎನ್ನುವಂತಾಗಿದೆ.

- Advertisement -

ನೂರು ವರ್ಷದ ನಂತರ ಇಂತಹ ಕಾಯಿಲೆ ಬಂದಿದ್ದು ನಾವ್ಯಾರು ನಿರೀಕ್ಷೆ ಮಾಡಿರಲಿಲ್ಲ. ಟೀಕೆ ವಿರೋಧ ಪಕ್ಷದ ಕರ್ತವ್ಯ. ಆದರೆ ಬಾಯಿಗೆ ಬಂದ ಹಾಗೆ ಟೀಕೆ ಮಾಡುವುದು ಒಳ್ಳೆಯದಲ್ಲ ಎಂದು ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Join Whatsapp