Home ಟಾಪ್ ಸುದ್ದಿಗಳು ಶಿವಮೊಗ್ಗದಲ್ಲಿ ಯಾವುದೇ ಸುಡುಗಾಡೂ ಇಲ್ಲ: ಕೋವಿಡ್ ಕರ್ಫ್ಯೂಗೆ ಈಶ್ವರಪ್ಪ ವಿರೋಧ

ಶಿವಮೊಗ್ಗದಲ್ಲಿ ಯಾವುದೇ ಸುಡುಗಾಡೂ ಇಲ್ಲ: ಕೋವಿಡ್ ಕರ್ಫ್ಯೂಗೆ ಈಶ್ವರಪ್ಪ ವಿರೋಧ

ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯಾದ್ಯಂತ ವಾರಾಂತ್ಯದ ಕರ್ಫ್ಯೂ ಮತ್ತು ನೈಟ್ ಕರ್ಫ್ಯೂ ಜಾರಿಗೊಳಿಸಿರುವ ನಿರ್ಧಾರವನ್ನು ಸಚಿವ ಕೆ.ಎ.ಎಸ್. ಈಶ್ವರಪ್ಪ ವಿರೋಧಿಸಿದ್ದಾರೆ.

ಈ ಬಗ್ಗೆ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದ ಎಲ್ಲ ಕಡೆಗಳಲ್ಲೂ ಒಂದೇ ಪರಿಸ್ಥಿತಿ ಇಲ್ಲ. ಕೋವಿಡ್ ಪ್ರಕರಣ ಜಾಸ್ತಿ ಇರುವ ಜಿಲ್ಲೆಗಳಲ್ಲಿ ಅಂತಹ ಕ್ರಮ ಕೈಗೊಳ್ಳಲಿ. ಕೋವಿಡ್ ಪ್ರಕರಣ ಕಡಿಮೆ ಇರುವ ಜಿಲ್ಲೆಗಳಿಗೆ ನಿಯಂತ್ರಣ ಬೇಡ ಎಂದರು.

‘ಇಂದು ನಡೆಯುವ ಸಂಪುಟ ಸಭೆಯಲ್ಲಿ ಈ ವಿಷಯದ ಬಗ್ಗೆ ಚರ್ಚಿಸುತ್ತೇವೆ. ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಹೇಳಿದರು.

ಕೋವಿಡ್ ಇರುವುದು ನಿಜ. ಹಾಗೆಂದು ಎಲ್ಲ ಕಡೆಯಲ್ಲೂ ಕರ್ಫ್ಯೂ ಜಾರಿಗೊಳಿಸಲು ಸಾಧ್ಯವಿಲ್ಲ. ರಾತ್ರಿ ಕರ್ಫ್ಯೂ ಆದೇಶ ಶಿವಮೊಗ್ಗ ಜಿಲ್ಲೆಯನ್ನು ತಲುಪಿಯೇ ಇಲ್ಲ. ನಮ್ಮ ಜಿಲ್ಲೆಯಲ್ಲಿ ರಾತ್ರಿ ಕರ್ಫ್ಯೂ ಇಲ್ಲ, ಸುಡುಗಾಡೂ ಇಲ್ಲ’ ಎಂದು ಹೇಳಿದ್ದಾರೆ.

Join Whatsapp
Exit mobile version