ಮೂರು ತಿಂಗಳಲ್ಲಿ ಜಿಪಂ, ತಾಪಂ ಚುನಾವಣೆ!: ಸಚಿವ ಕೆಎಸ್ ಈಶ್ವರಪ್ಪ

Prasthutha|

- Advertisement -

ಬೆಂಗಳೂರು: ಇನ್ನು ಮೂರು ತಿಂಗಳಲ್ಲಿ ಅಂದರೆ, 2022ರ ಮಾರ್ಚ್ ತಿಂಗಳ ಒಳಗೆ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಯುವ ಸಾಧ್ಯತೆಯಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಕ್ಷೇತ್ರಗಳ ಪುನರ್ವಿಂಗಡನೆ ಪ್ರಕ್ರಿಯೆಯಲ್ಲಿ ಬಹುತೇಕ ಕ್ಷೇತ್ರಗಳಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ. ಗಡಿ ಮಾತ್ರ ಬದಲಾವಣೆ ಆಗುತ್ತದೆ ಎಂದು ಸ್ಪಷ್ಟಪಡಿಸಿದರು.

ನರೇಗಾ ಯೋಜನೆಯಡಿ 2021-22ನೇ ಸಾಲಿನಲ್ಲಿ ನೀಡಿದ್ದ 13 ಕೋಟಿ ಮಾನವ ದಿನದ ಗುರಿಯನ್ನು ಮೀರಿ ಕರ್ನಾಟಕದಲ್ಲಿ ಉದ್ಯೋಗ ಸೃಜನೆಯಾಗಿದೆ. ಈವರೆಗೆ 13.14 ಕೋಟಿ ಮಾನವ ದಿನಗಳ ಉದ್ಯೋಗ ಸೃಜನೆಯಾಗಿದೆ. ಸರ್ಕಾರದ ಬೇಡಿಕೆ ಪರಿಗಣಿಸಿ ಉದ್ಯೋಗ ಸೃಜನೆಗೆ ಅವಕಾಶ ನೀಡಲಾಗಿದೆ. ಈ ಸಾಲಿನಲ್ಲಿ 1.40 ಕೋಟಿ ಉದ್ಯೋಗ ಸೃಜನೆಗೆ ಕೇಂದ್ರವು ಒಪ್ಪಿಗೆ ನೀಡಿದೆ. ಇದರಿಂದ ರಾಜ್ಯಕ್ಕೆ ಹೆಚ್ಚುವರಿ 715 ಕೋಟಿ ಅನುದಾನ ಲಭ್ಯವಾಗಿದೆ. ಈ ವರ್ಷ 10.68 ಲಕ್ಷ ಜನರು ಯೋಜನೆಗೆ ಸೇರ್ಪಡೆಯಾಗಿದ್ದಾರೆ ಎಂದು ನುಡಿದರು.

- Advertisement -

ಜಲಶಕ್ತಿ ಅಭಿಯಾನದಲ್ಲಿ ಕಾಮಗಾರಿ ಪೂರ್ಣಗೊಂಡಿದೆ. ಕಾಮಗಾರಿ ಮುಗಿಸುವ ವೇಗದಲ್ಲಿ ಕರ್ನಾಟಕವು ದೇಶದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ. ರಾಮನಗರ, ತುಮಕೂರು, ಬೆಳಗಾವಿ, ಚಿತ್ರದುರ್ಗ, ಕೊಪ್ಪಳ, ಕಲಬುರಗಿಯಲ್ಲಿ ಜಲಶಕ್ತಿ ಅಭಿಯಾನದಲ್ಲಿ ಹೆಚ್ಚು ಕಾಮಗಾರಿ ನಡೆದಿದೆ ಎಂದರು

Join Whatsapp