Home ಟಾಪ್ ಸುದ್ದಿಗಳು ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್: ಗುತ್ತಿಗೆದಾರ ಸಂತೋಷ್​ ಪತ್ನಿ ಆಕ್ರೋಶ

ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್: ಗುತ್ತಿಗೆದಾರ ಸಂತೋಷ್​ ಪತ್ನಿ ಆಕ್ರೋಶ

ಬೆಳಗಾವಿ: ಗುತ್ತಿಗೆದಾರ ಸಂತೋಷ್​ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಈಶ್ವರಪ್ಪ ಅವರನ್ನು ವಿಚಾರಣೆ ಮಾಡದೆ ಕ್ಲೀನ್ ಚಿಟ್ ನೀಡಿರುವದನ್ನು ತೀವ್ರವಾಗಿ ಖಂಡಿಸಿರುವ ಸಂತೋಷ್​ ಪಾಟೀಲ್ ಪತ್ನಿ ಜಯಶ್ರೀ ಪೊಲೀಸರು ರಾಜಕೀಯ ಒತ್ತಡಕ್ಕೆ ಮಣಿದು ಪ್ರಕರಣ ಮುಚ್ಚಿಹಾಕಲು ಹೊರಟಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈ ಪ್ರಕರಣವನ್ನು ಸಿ ಬಿ ಐ ಗೆ ವಹಿಸಬೇಕು. ಇಲ್ಲದಿದ್ದರೆ ನಾವು ಇದನ್ನು ನ್ಯಾಯಾಲಯದಿಂದ ಪ್ರಶ್ನೆ ಮಾಡುತ್ತೇವೆ . ಈಶ್ವರಪ್ಪನವರೇ ಆರೋಪಿ ಎಂದು ನನ್ನ ಗಂಡ ಡೆತ್ ನೋಟ್​​​ ನಲ್ಲಿ ಬರೆದು ಇಟ್ಟಿದ್ದಾರೆ. ಸಂತೋಷ್​ ಸಾವಿನ ನಂತರ ಮೂರರಿಂದ ನಾಲ್ಕು ತಾಸು ಫೋನ್ ಆನ್ ಇತ್ತು, ಅದರಲ್ಲಿ ಎಲ್ಲ ಸಾಕ್ಷಿ ಇತ್ತು, ಹೀಗಿರುವಾಗ ಸಾಕ್ಷಾಧಾರಗಳ ಕೊರತೆ ಹೇಗೆ ಆಗುತ್ತದೆ ಎಂದು ಪ್ರಶ್ನಿಸಿದ್ದಾರೆ.

Join Whatsapp
Exit mobile version