ಪ್ರಧಾನಿ ಮೋದಿ ಚಿಲ್ಲರೆ ಮನುಷ್ಯ ಅಲ್ಲ, ಚಿನ್ನದ ಗಟ್ಟಿ ಎಂದ ಈಶ್ವರಪ್ಪ

Prasthutha|

ಕಲಬುರಗಿ: ಮೋದಿ ಚಿಲ್ಲರೆ ಮನುಷ್ಯ ಅವರ ಮಾತಿಗೆ ಬೆಲೆ ಕೊಡಬೇಡಿ ಎಂಬ ಕಾಂಗ್ರೆಸ್ ಮುಖಂಡ ಮಲ್ಲಕಾರ್ಜುನ ಖರ್ಗೆ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಸಚಿವ ಕೆ.ಎಸ್.ಈಶ್ವರಪ್ಪ, ಪ್ರಧಾನಿ ಮೋದಿ ಚಿಲ್ಲರೆ ಮನುಷ್ಯ ಅಲ್ಲ. ಚಿನ್ನದ ಗಟ್ಟಿ ಇದ್ದಂತೆ ಎಂದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಬಾಯ್ತಪ್ಪಿ ಹೇಳಿಕೆ ನೀಡಿದ್ದರೆ ಕ್ಷಮೆಯಾಚಿಸಲಿ. ಇಲ್ಲದಿದ್ದರೇ ಮೋದಿ ಚಿಲ್ಲರೆ ಎಂಬುದರ ಬಗ್ಗೆ ವಿವರಣೆ ಕೊಡಲಿ ಎಂದು ಆಗ್ರಹಿಸಿದರು.

- Advertisement -

ಬಿಜೆಪಿಯ ಶಾಸಕರು ಸಿಂಹ ಇದ್ದಂತೆ,ನಮ್ಮ ಶಾಸಕರು ಮಾರಾಟದ ವಸ್ತುಗಳಲ್ಲ. ಬಿಜೆಪಿಯ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುವ ಮಾತೇ ಇಲ್ಲ. 40 ಅಲ್ಲ, 4 ಜನ ಶಾಸಕರನ್ನು ಕಾಂಗ್ರೆಸ್ ಪಕ್ಷ ಸೆಳೆಯಲಿ ನೋಡೋಣ ಎಂದು ಈಶ್ವರಪ್ಪ ಸವಾಲು ಹಾಕಿದರು.

Join Whatsapp