ರಾಜೀನಾಮೆಗೂ ಮುನ್ನ 29 ಅಧಿಕಾರಿಗಳ ಸಾಮೂಹಿಕ ವರ್ಗಾವಣೆ ಮಾಡಿದ ಈಶ್ವರಪ್ಪ !

Prasthutha|

ಬೆಂಗಳೂರು: ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ ಎಸ್ ಈಶ್ವರಪ್ಪ ನಿನ್ನೆ ರಾಜೀನಾಮೆ ನೀಡಲಾಗುವುದು ಎಂದು ಘೋಷಿಸಿದ್ದಾರೆ. ಈ ಮಧ್ಯೆ ಸುಮಾರು 29 ಅಧಿಕಾರಿಗಳನ್ನು ವರ್ಗಾವಣೆ ಮಾಡಿರುವುದು ಹಲವಾರು ಅನುಮಾನಗಳಿಗೆ ಕಾರಣವಾಗಿದೆ.

- Advertisement -


ರಾಜ್ಯದ ಹಲವಾರು ಕಡೆಯಲ್ಲಿನ ಜಿಲ್ಲಾ ಪಂಚಾಯತ್ , ತಾಲ್ಲೂಕು ಪಂಚಾಯತ್ ಪಿಡಿಓಗಳನ್ನು ಎರಡು ದಿನಗಳ ಹಿಂದೆ ವರ್ಗಾವಣೆ ಮಾಡಲಾಗಿದೆ. ಅಧಿಕಾರದಿಂದ ತೆರಳುವ ಮುನ್ನಾ ವರ್ಗಾವಣೆ ಮಾಡಿರುವುದು ಹಲವರು ಅನುಮಾನಗಳಿಗೆ ಕಾರಣವಾಗಿದೆ.
ಸಾಮೂಹಿಕವಾಗಿ ಈ ರೀತಿಯಲ್ಲಿ ವರ್ಗಾವಣೆ ಮಾಡಿರುವುದು ಸಚಿವ ಈಶ್ವರಪ್ಪ ಹಾಗೂ ಮುಖ್ಯಮಂತ್ರಿ ಅವರ ಮೇಲೆ ಹಲವು ಅನುಮಾನಗಳಿಗೆ ಎಡೆಮಾಡಿದೆ. ಇದಕ್ಕೆ ಮುಖ್ಯಮಂತ್ರಿ ಅವರು ಕೊನೆ ಕ್ಷಣದಲ್ಲಿ ಅಂಕಿತ ಹಾಕಿರುವುದು ಈ ಅನುಮಾನಗಳಿಗೆ ಮತ್ತಷ್ಟು ಎಡೆ ಮಾಡಿಕೊಟ್ಟಿದೆ.

Join Whatsapp