ಕಲುಷಿತ ನೀರು ಸೇವಿಸಿ ಮೃತಪಟ್ಟವರ 5 ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

Prasthutha|

ಚಿತ್ರದುರ್ಗ: ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಐವರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಥಳಕ್ಕೆ ಭೇಟಿ ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದರು.

- Advertisement -


ಬಳಿಕ ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರದ ಚೆಕ್ ನೀಡಿದರು.

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, ಕವಾಡಿಗರಹಟ್ಟಿ ದುರಂತ ವಿಚಾರ ಸಾಕಷ್ಟು ನೋವುಂಟು ಮಾಡಿದೆ. ಮತ್ತೆ ಬೇರೆ ಕಡೆ ಇಂತಹ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗುತ್ತದೆ. ಪ್ರಕರಣ ಸಂಬಂಧ ಸೂಕ್ತ ವರದಿ ನೀಡುವಂತೆ ಸೂಚಿಸಲಾಗಿದೆ. ಇಲಾಖೆಯ ಲೋಪದೋಷವಿದ್ದರೇ ಸರಿಪಡಿಸಲು ಸೂಚನೆ ನೀಡಿದ್ದೇನೆ. ಇಂತಹ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ತಪ್ಪಿತಸ್ಥರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.



Join Whatsapp