ಮಾಜಿ ಶಾಸಕರ ಕಾರು ಅಪಘಾತ; 6ಮಂದಿಗೆ ಗಾಯ

Prasthutha|

ಚಿಕ್ಕೋಡಿ: ಮಾಜಿ ಶಾಸಕ ಹಾಗೂ ಜೆಡಿಎಸ್ ಮುಖಂಡ ಕಲ್ಲಪ್ಪ ಮಗೆಣ್ಣನವರ  ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿ 6ಮಂದಿ ಗಾಯಗೊಂಡ ಘಟನೆ ಅಥಣಿಯ ಹೊರವಲಯದಲ್ಲಿ ನಡೆದಿದೆ.

- Advertisement -

ವಿಜಯಪುರದಿಂದ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮಕ್ಕೆ ಮಾಜಿ ಶಾಸಕರು ಸೇರಿದಂತೆ 6 ಜನರು ಕಾರಿನಲ್ಲಿ ನಿನ್ನೆ ರಾತ್ರಿ ತೆರಳುತ್ತಿದ್ದರು. ಈ ವೇಳೆ ಚಲಿಸುತ್ತಿದ್ದ ಲಾರಿಯೊಂದರ ಟೈಯರ್​ ಬ್ಲಾಸ್ಟ್ ಆಗಿ ಕಾರಿನ ಮೇಲೆ ಟೈಯರ್ ಬಿದ್ದ ಪರಿಣಾಮ, ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಪಲ್ಟಿಯಾಗಿದೆ. ಲಾರಿಯು ಅಥಣಿಯಿಂದ ವಿಜಯಪುರದತ್ತ ಸಾಗುತ್ತಿತ್ತು.

ಅಪಘಾತದಲ್ಲಿ ಕಾರಿನಲ್ಲಿದ್ದ ಕಲ್ಲಪ್ಪ ಮಗೆಣ್ಣವರ ಸೇರಿದಂತೆ 6 ಜನರು ಸಣ್ಣಪುಟ್ಟ ಗಾಯಗೊಂಡು ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಥಣಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.

Join Whatsapp