Home ಟಾಪ್ ಸುದ್ದಿಗಳು ಮಿತಿಮೀರಿದ ಕಾಡಾನೆಗಳ ಹಾವಳಿ; ದಯಾಮರಣ ಕೋರಿ ಸರ್ಕಾರಕ್ಕೆ ಮನವಿ ಮಾಡಿದ ರೈತರು

ಮಿತಿಮೀರಿದ ಕಾಡಾನೆಗಳ ಹಾವಳಿ; ದಯಾಮರಣ ಕೋರಿ ಸರ್ಕಾರಕ್ಕೆ ಮನವಿ ಮಾಡಿದ ರೈತರು

ಹಾಸನ: ಮಲೆನಾಡು ಭಾಗದಲ್ಲಿ ಕಾಡಾನೆಗಳ ಉಪಟಳ ತೀವ್ರಗೊಂಡಿದ್ದು, ಕಂಗಾಲಾದ ರೈತರು ದಯಾಮರಣ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಸಕಲೇಶಪುರ ತಾಲೂಕಿನ ಕೆಸಲಗುಲಿ ಗ್ರಾಮದಲ್ಲಿ ಆನೆಗಳ ದಾಳಿಯಿಂದ ಅಪಾರ ಪ್ರಮಾಣದ ಕಾಫಿ, ಭತ್ತ ಸೇರಿದಂತೆ ಇತರೆ ಬೆಳೆಗಳು ನಾಶವಾಗಿದೆ.

 ಈ ಬಗ್ಗೆ ಪ್ರತಿಕ್ರಿಯಿಸಿರುವ  ಹೆಬ್ಬನಹಳ್ಳಿ ಗ್ರಾಮದ ಕಾಫಿ ಬೆಳೆಗಾರ ಸೋಮೇಶ್, ಕಾಫಿ ಗಿಡವನ್ನು ಬೆಳಯಲು ಸುಮಾರು 20 -30 ವರ್ಷಗಳು ಬೇಕಾಗುತ್ತದೆ. ಆದರೆ ಕಾಡಾನೆ ದಾಳಿಯಿಂದಾಗಿ ನಾವು ಕಷ್ಟಪಟ್ಟು ಬೆಳೆದ ಬೆಳೆಗಳೆಲ್ಲವೂ ನಾಶವಾಗುತ್ತಿದೆ. ಇದನ್ನು ನೋಡಿ ತುಂಬಾ ಬೇಜಾರಾಗುತ್ತಿದೆ. ಒಂದೊಂದು ದಿನವೂ ಕಳೆಯುವುದು ನಮಗೆ ದುಸ್ಸಾಹಸವಾಗಿದೆ. ಇದನ್ನೆಲ್ಲಾ ನೋಡಿದರೆ ಜೀವಂತವಾಗಿ ಯಾಕೆ ಇರಬೇಕು ಎನಿಸುತ್ತದೆ. ಸರ್ಕಾರ ನಮಗೆ ದಯಾಮರಣ ನೀಡಲಿ. ನಾವೆಲ್ಲರೂ ಸಾಯುತ್ತೇವೆ ಎಂದು ಕಣ್ಣೀರಿಟ್ಟರು.

ಯಾವ ರೀತಿ ಬದುಕಬೇಕೆಂಬುದೇ ತೋಚುತ್ತಿಲ್ಲ. ಕಾಫಿ ಹಣ್ಣು ಕೊಯ್ಯಲು ಬರುವವರು ಹೆದರಿಕೆಯಿಂದ ವಾಪಸ್ ಹೋಗುತ್ತಿದ್ದಾರೆ. ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ. ಸರ್ಕಾರವು ಟಾಸ್ಕ್ ಫೋರ್ಸ್ ರಚನೆ ಮಾಡಿದೆ. ಆದರೆ ಅವರು ಜೀಪ್ ನಲ್ಲಿ ತಿರುಗುತ್ತಿದ್ದಾರೆ. ಅವರಿಂದ ರೈತರಿಗೆ ಒಂದು ಪೈಸೆಯೂ ಉಪಕಾರ ಆಗುತ್ತಿಲ್ಲ.  ಅರಣ್ಯ ಇಲಾಖೆಯವರಿಗೆ ಕೊಡುವ ಅರ್ಧ ಸಂಬಳ ನಮಗೆ ಕೊಡಿ, ನಾವು ಕಾಡಾನೆಗಳನ್ನು ದೂರ ಓಡಿಸಿ ಬೆಳೆ ಕಾಪಾಡಿಕೊಳ್ಳುತ್ತೇವೆ ಎಂದು ಸರ್ಕಾರ ಹಾಗೂ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿದರು.

Join Whatsapp
Exit mobile version