ಬಾಂಬ್ ತಯಾರಿಕೆ ವೇಳೆ ಸ್ಫೋಟ| ಬಿಜೆಪಿ ಕಾರ್ಯಕರ್ತ ಮತ್ತು ಪತ್ನಿಗೆ ಗಾಯ

Prasthutha|

ಕಣ್ಣೂರು: ಮನೆಯೊಳಗೆ ಬಾಂಬ್ ನಿರ್ಮಾಣದ ವೇಳೆ ಸ್ಫೋಟ ಸಂಭವಿಸಿ ಇಬ್ಬರು ಗಾಯಗೊಂಡ ಘಟನೆ ಕೇರಳದ ಕಣ್ಣೂರು ಜಿಲ್ಲೆಯ ಕಾಕಯಂಙಾಟ್ ನಲ್ಲಿ ನಡೆದಿದೆ.

- Advertisement -

ಗಾಯಗೊಂಡವರನ್ನು ಬಿಜೆಪಿ ಕಾರ್ಯಕರ್ತ ಸಂತೋಷ್ ಮತ್ತು ಆತನ ಪತ್ನಿ ಲಸಿತಾ ಎಂದು ಗುರುತಿಸಲಾಗಿದೆ.
ಭಾನುವಾರ ಸಂಜೆ 6 ಗಂಟೆ ಸುಮಾರಿಗೆ ಮನೆಯೊಳಗೆ ಬಾಂಬ್ ತಯಾರಿಸುತ್ತಿದ್ದಾಗ ಸ್ಫೋಟ ಸಂಭವಿಸಿದೆ. ಗಾಯಗೊಂಡಿರುವ ಸಂತೋಷ್ ಮತ್ತು ಆತನ ಪತ್ನಿ ಬಿಜೆಪಿ ಕಾರ್ಯಕರ್ತರಾಗಿದ್ದಾರೆ.

ಗಾಯಾಳು ದಂಪತಿಯನ್ನು ತಲಶ್ಶೇರಿಯ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

- Advertisement -

ಈ ಹಿಂದೆಯೂ ಬಾಂಬ್ ಸ್ಫೋಟಗೊಂಡು ಸಂತೋಷ್ ಗಾಯಗೊಂಡಿದ್ದು, ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು. ಈ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವಾಗಲೇ ಮನೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ.

Join Whatsapp