ಉಪಮುಖ್ಯಮಂತ್ರಿ ಸ್ಥಾನಕ್ಕೆ ಫಡ್ನವಿಸ್ ಸಂತೋಷದಿಂದ ಒಪ್ಪಿಕೊಂಡಿರಲಿಕ್ಕಿಲ್ಲ: ಶರದ್ ಪವಾರ್

Prasthutha|

ಮುಂಬೈ: ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಪಕ್ಷದ ಆದೇಶದ ನಂತರ ಪ್ರಮಾಣವಚನ ಸ್ವೀಕರಿಸಿರುವ  ಬಿಜೆಪಿಯ ದೇವೇಂದ್ರ ಫಡ್ನವಿಸ್ ಅವರು “ಸಂತೋಷದಿಂದ” ಒಪ್ಪಿಕೊಂಡಿರಲಿಲ್ಲ ಎಂದು ಎನ್ ಸಿ ಪಿ ಮುಖಂಡ ಶರದ್ ಪವಾರ್ ಹೇಳಿದ್ದಾರೆ.

- Advertisement -

ಮಹಾ ವಿಕಾಸ್ ಅಘಾಡಿಯ ಭಾಗವಾಗಿದ್ದ   ಪವಾರ್ ಅವರ ಎನ್ ಸಿಪಿ, ಉದ್ಧವ್ ಠಾಕ್ರೆ ಸಿಎಂ ಹುದ್ದೆಯಿಂದ ಕೆಳಗಿಳಿದ ಕಾರಣ ನಿನ್ನೆ ಅಧಿಕಾರವನ್ನು ಕಳೆದುಕೊಂಡಿತ್ತು.

“ದೇವೇಂದ್ರ ಫಡ್ನವಿಸ್ ಅವರು ಉಪಮುಖ್ಯಮಂತ್ರಿ ಸ್ಥಾನವನ್ನು ಸಂತೋಷದಿಂದ ಒಪ್ಪಿಕೊಂಡಿದ್ದಾರೆ ಎಂದು ನಾನು ಭಾವಿಸುವುದಿಲ್ಲ” ಎಂದು  ಪವಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Join Whatsapp