ನಕಲಿ ಎನ್’ಕೌಂಟರ್: 16 ವರ್ಷ ಬಳಿಕ ಉತ್ತರ ಪ್ರದೇಶದ 9 ಪೊಲೀಸರಿಗೆ ಜೀವಾವಧಿ ಶಿಕ್ಷೆ

Prasthutha|

ಗಾಜಿಯಾಬಾದ್: ಉತ್ತರ ಪ್ರದೇಶದ ಇಟಾಹ್’ನಲ್ಲಿ ನಡೆದ ನಕಲಿ ಎನ್’ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಜಿಯಾಬಾದ್ ವಿಶೇಷ ಸಿಬಿಐ ಕೋರ್ಟ್ ಅಂದಿನ ಪೊಲೀಸ್ ಠಾಣಾಧಿಕಾರಿ ಸೇರಿದಂತೆ ಒಂಬತ್ತು ಪೊಲೀಸ್ ಅಧಿಕಾರಿಗಳಿಗೆ  ಜೀವಾವಧಿ ಶಿಕ್ಷೆ ವಿಧಿಸಿದೆ.

- Advertisement -

ಮಾಜಿ ಠಾಣಾಧಿಕಾರಿ ಪವನ್ ಸಿಂಗ್, ಪಾಲ್ ಸಿಂಗ್ ತೇನ್ವಾ, ರಾಜೇಂದ್ರ ಪ್ರಸಾದ್, ಸರ್ನಾಮ್ ಸಿಂಗ್ ಮತ್ತು ಮೊಹ್ಕಮ್ ಸಿಂಗ್ ಸೇರಿದಂತೆ ಎಲ್ಲಾ ಒಂಬತ್ತು ಅಪರಾಧಿಗಳಿಗೆ ಸಿಬಿಐ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಅಲ್ಲದೆ ನ್ಯಾಯಾಲಯವು ಪ್ರತಿಯೊಬ್ಬ ಅಪರಾಧಿಗೂ 30,000 ರೂಪಾಯಿ ದಂಡ ವಿಧಿಸಿದೆ.

- Advertisement -

2006ರ ಆಗಸ್ಟ್ 18ರಂದು ನಡೆದ ಎನ್ ಕೌಂಟರ್ ನಲ್ಲಿ ಸುನೆಹ್ರಾ ಗ್ರಾಮದ ನಿವಾಸಿ ರಾಜಾರಾಂ ಎಂಬ ಕಾರ್ಪೆಂಟರ್ ನನ್ನು ಹತ್ಯೆ ಮಾಡಲಾಗಿತ್ತು. ಸಿಧ್ ಪುರ ಪೊಲೀಸ್ ಠಾಣೆಯಲ್ಲಿ ನಿಯೋಜಿಸಲಾಗಿದ್ದ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಪೊಲೀಸರು ರಾಜಾರಾಂನನ್ನು ಡಕಾಯಿತನಂತೆ ಬಿಂಬಿಸಿ ನಕಲಿ ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದ್ದರು. ನಂತರ ರಾಜಾರಾಮ್ ಅವರ ಪತ್ನಿ ಸಂತೋಷ್ ಕುಮಾರಿ ಅವರು ತನ್ನ ಪತಿಯ ಎನ್ ಕೌಂಟರ್  ಸಾವಿನ ಬಗ್ಗೆ ತನಿಖೆ ನಡೆಸಬೇಕೆಂದು ಅಲಹಾಬಾದ್ ಹೈಕೋರ್ಟ್’ಗೆ ಮನವಿ ಮಾಡಿದ್ದರು. ಮನವಿ ಪರಿಗಣಿಸಿದ ಹೈಕೋರ್ಟ್ 2007ರಲ್ಲಿ ಪ್ರಕರಣವನ್ನು ಸಿಬಿಐಗೆ ವಹಿಸಿತ್ತು.

Join Whatsapp