ದಕ್ಷಿಣ ಕನ್ನಡ ಜಿ.ಪಂ. ಉಪ ಕಾರ್ಯದರ್ಶಿ ಆನಂದ್ ಕುಮಾರ್ ಗೆ ಬೀಳ್ಕೊಡುಗೆ

Prasthutha|

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ‌ ಕೆ. ಆನಂದ್ ಕುಮಾರ್ ಅವರು ವರ್ಗಾವಣೆಯಾಗಿದ್ದು, ನಗರದ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಆ.7ರ ಸೋಮವಾರ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.

- Advertisement -

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಹಾಗೂ ಜಿಲ್ಲಾ ಪಂಚಾಯತ್ ಕಚೇರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ವರ್ಗಾವಣೆಯಾದ ಆನಂದ್ ಕುಮಾರ್ ಅವರನ್ನು ಸನ್ಮಾನಿಸಿ, ಗೌರವಿಸಿದರು.

ತುಮಕೂರಿನಲ್ಲಿ ಭಾರತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ರಘು ಎ.ಇ. ಅವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಯಾಗಿ ಇಂದು ಅಧಿಕಾರ ಸ್ವೀಕರಿಸಿರುತ್ತಾರೆ.

Join Whatsapp