ನಾಡಕೋವಿಯಿಂದ ಗುಂಡು ಹಾರಿಸಿಕೊಂಡು ಕೃಷಿಕ ಆತ್ಮಹತ್ಯೆ

Prasthutha|

ಉಡುಪಿ:  ಸಾಲಬಾಧೆಯಿಂದ ನೊಂದ ಪ್ರಗತಿಪರ ಕೃಷಿಕರೋರ್ವರು ನಾಡಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದ ತೆಳ್ಳಾರಿನಲ್ಲಿ ಇಂದು ಬೆಳಿಗ್ಗೆನಡೆದಿದೆ.

- Advertisement -

ತೆಳ್ಳಾರು ನೀಲೆಬೆಟ್ಟು ಭಾಸ್ಕರ ಹೆಗ್ಡೆ (63 ) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಪತ್ನಿ ಚಹಾ ಮಾಡಲೆಂದು ಅಡುಗೆ ಕೋಣೆಗೆ ಹೋಗಿದ್ದ ಸಂದರ್ಭದಲ್ಲಿ ಭಾಸ್ಕರ ಹೆಗ್ಡೆಯವರು ಸ್ವತಃ ಗುಂಡು ಹೊಡೆದುಕೊಂಡಿದ್ದಾರೆ. ಗುಂಡಿನ ಸದ್ದು ಕೇಳಿ ಪತ್ನಿ ಹೊರಗೆ ಬಂದಾಗ   ಮೃತಪಟ್ಟಿರುವುದು ತಿಳಿದು ಬಂದಿದೆ.

ಕಾರ್ಕಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತರು ಸಾವಯವ ಕೃಷಿಯಲ್ಲಿ ತೊಡಗಿಸಿಕೊಂಡಿದ್ದು, ತನ್ನ ಜಮೀನಿನಲ್ಲಿ ಸಾವಯವ ತರಕಾರಿ ಬೆಳೆಯುತಿದ್ದರು. ಆತ್ಮಹತ್ಯೆಗೆ ಆರ್ಥಿಕ ಅಡಚಣೆ ಕಾರಣ ಎಂದು ಹೇಳಲಾಗುತ್ತಿದೆ.

Join Whatsapp