Home ಟಾಪ್ ಸುದ್ದಿಗಳು ಅಕ್ರಮ ವಿದ್ಯುತ್ ಬೇಲಿಗೆ ರೈತ ಬಲಿ: ಜಮೀನು ಮಾಲೀಕನನ್ನು ಗುಂಪುಹತ್ಯೆ ಮಾಡಿದ ಗ್ರಾಮಸ್ಥರು

ಅಕ್ರಮ ವಿದ್ಯುತ್ ಬೇಲಿಗೆ ರೈತ ಬಲಿ: ಜಮೀನು ಮಾಲೀಕನನ್ನು ಗುಂಪುಹತ್ಯೆ ಮಾಡಿದ ಗ್ರಾಮಸ್ಥರು

ಬೆಂಗಳೂರು: ಅಕ್ರಮ ವಿದ್ಯುತ್ ಬೇಲಿಗೆ ರೈತರೊಬ್ಬ ಬಲಿಯಾಗಿದ್ದರಿಂದ ರೊಚ್ಚಿಗೆದ್ದ ಸ್ಥಳೀಯರು ಜಮೀನು ಮಾಲೀಕನನ್ನು ಹೊಡೆದು ಸಾಯಿಸಿರುವ ದುರ್ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚರಕಮಟ್ಟೇನಹಳ್ಳಿ ಬಳಿ ನಡೆದಿದೆ.


ಚರಕಮಟ್ಟೇನಹಳ್ಳಿಯ ರೈತ ವಸಂತರಾವ್ ವಿದ್ಯುತ್ ಬೇಲಿಗೆ ಬಲಿಯಾದ ರೈತನಾಗಿದ್ದು ವಸಂತರಾವ್ ಸಾವಿಗೆ ಅಕ್ರಮವಾಗಿ ವಿದ್ಯುತ್ ತಂತಿ ಬೇಲಿ ಅಳವಡಿಸಿದ್ದ ಜಮೀನು ಮಾಲೀಕ ಕಾರಣ ಎಂದು ಆಕ್ರೋಶಗೊಂಡ ಸ್ಥಳೀಯರು ಈ ಕೃತ್ಯವೆಸಗಿದ್ದಾರೆ.


ರೈತ ವಸಂತರಾವ್ ವಿದ್ಯುತ್ ತಂತಿಗೆ ಬಲಿಯಾದ ಸುದ್ದಿ ತಿಳಿದು ಗ್ರಾಮಸ್ಥರು ಸ್ಥಳದಲ್ಲಿ ಜಮಾಯಿಸಿದ್ದರು. ಆ ವೇಳೆ ಜಮೀನು ಮಾಲೀಕ ಅಶ್ವತ್ಥ ರಾವ್ ಮೇಲೆ ಮಾರಣಾಂತಿಕವಾಗಿ ಥಳಿಸಿದ್ದಾರೆ.
ತೀವ್ರವಾಗಿ ಗಾಯಗೊಂಡಿದ್ದ ಅಶ್ವತ್ಥ ರಾವ್ ದೊಡ್ಡಬಳ್ಳಾಪುರದ ಖಾಸಗಿ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ಹಲ್ಲೆಗೀಡಾಗಿ ಮೃತಪಟ್ಟ ಅಶ್ವತ್ಥ ರಾವ್ ತಮ್ಮ ಟೊಮ್ಯಾಟೊ ತೋಟಕ್ಕೆ ಅಕ್ರಮವಾಗಿ ವಿದ್ಯುತ್ ತಂತಿ ಬೇಲಿ ಅಳವಡಿಸಿದ್ದರು ಎನ್ನಲಾಗಿದೆ. ಅಶ್ವತ್ಥ ರಾವ್ ಅವರು ಗೌರಿಬಿದನೂರು ತಾಲೂಕಿನ ಚಿಕ್ಕಹನುಮೇನಹಳ್ಳಿ ನಿವಾಸಿಯಾಗಿದ್ದು ಸ್ಥಳಕ್ಕೆ ಮಂಚೇನಹಳ್ಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Join Whatsapp
Exit mobile version