ರೈತರಿಂದ ಆಗಸ್ಟ್‌ 1ರಂದು ರೈತರಿಂದ ದೇಶದಾದ್ಯಂತ ಬಿಜೆಪಿ ನಾಯಕರ ಪ್ರತಿಕೃತಿ ದಹನ

Prasthutha|

ನವದೆಹಲಿ: ಕೃಷಿ ಬೆಳೆಗಳಿಗೆ ಎಂಎಸ್‌ಪಿ ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್‌ 1ರಂದು ದೇಶದಾದ್ಯಂತ ಬಿಜೆಪಿ ನಾಯಕರ ಪ್ರತಿಕೃತಿಗಳನ್ನು ದಹಿಸುವ ಮೂಲಕ ಮತ್ತು ಆಗಸ್ಟ್‌ 15ರಂದು ಟ್ರ್ಯಾಕ್ಟರ್‌ ರ್‍ಯಾಲಿ ನಡೆಸಿ ಪ್ರತಿಭಟನೆ ನಡೆಸುವುದಾಗಿ ರೈತ ನಾಯಕರು ತಿಳಿಸಿದ್ದಾರೆ.

- Advertisement -

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಎಂಎಂ ನಾಯಕ ಸರವಣ ಸಿಂಗ್‌ ಪಂಢೇರ್, ರೈತರು ‘ದೆಹಲಿ ಚಲೋ’ ಹಮ್ಮಿಕೊಂಡು ಆಗಸ್ಟ್‌ 31ಕ್ಕೆ 200 ದಿನಗಳು ಪೂರ್ಣಗೊಳ್ಳಲಿದೆ. ಅಂದು ಪಂಜಾಬ್‌ ಮತ್ತು ಹರಿಯಾಣ ರಾಜ್ಯಗಳ ಖನೌರಿ ಮತ್ತು ಶಂಭು ಗಡಿಗಳಲ್ಲಿ ಸೇರುವಂತೆ ಜನರಿಗೆ ಕರೆ ನೀಡಿದ್ದಾರೆ.

ಆಗಸ್ಟ್‌ 1ರಂದು ದೇಶದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸೇರುವ ರೈತರು ಆಡಳಿತಾರೂಢ ಬಿಜೆಪಿ ನಾಯಕರ ಪ್ರತಿಕೃತಿಗಳನ್ನು ದಹಿಸಲಿದ್ದಾರೆ. ಅದೇ ರೀತಿ ಆಗಸ್ಟ್‌ 15ರಂದು ಎಲ್ಲ ಜಿಲ್ಲೆಗಳಲ್ಲಿ ರೈತರು ಟ್ರ್ಯಾಕ್ಟರ್‌ ರ್‍ಯಾಲಿ ನಡೆಸಲಿದ್ದಾರೆ ಎಂದು ಸಂಯುಕ್ತ ಕಿಸಾನ್‌ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್‌ ಮಜ್ದೂರ್‌ ಮೋರ್ಚಾ (ಕೆಎಂಎಂ) ಹೇಳಿದೆ.



Join Whatsapp