ಐ.ಎ.ಎಸ್ ಅಧಿಕಾರಿ ಆಯುಷ್ ಸಿನ್ಹಾ ವಿರುದ್ಧ ಶಿಸ್ತುಕ್ರಮದ ಭರವಸೆ : ಪ್ರತಿಭಟನೆಯಿಂದ ಹಿಂದೆ ಸರಿದ ಭಾರತೀಯ ಕಿಸಾನ್ ಯೂನಿಯನ್

Prasthutha|

ಕರ್ನಾಲ್: ಕಳೆದು ತಿಂಗಳು ಐ.ಎ.ಎಸ್ ಅಧಿಕಾರಿ ಆಯುಷ್ ಸಿನ್ಹಾ ಅವರು “ರೈತರ ತಲೆ ಒಡೆಯಿರಿ” ಎಂಬ ವಿವಾದಾತ್ಮಕ ಹೇಳಿಕೆಯಿಂದ ಆಕ್ರೋಶಿತರಾದ ರೈತರು ತಮ್ಮ ಪ್ರತಿಭಟನೆಯನ್ನು ತೀವ್ರ ಗೊಳಿಸಿ ಅಧಿಕಾರಿಯನ್ನು ಕರ್ತವ್ಯದಿಂದ ಅಮಾನತು ಮಾಡುವಂತೆ ಒತ್ತಾಯಿಸಿದ್ದರು.

- Advertisement -

ಮಾತ್ರವಲ್ಲ ತೀವ್ರ ರೀತಿಯ ಪ್ರತಿಭಟನೆಯ ಹಿನ್ನೆಲೆಯಲ್ಲಿ ಕರ್ನಾಲ್ ಸರ್ಕಾರಿ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ್ದರು. ಈ ಸಂಬಂಧ ರೈತರನ್ನು ಚದುರಿಸುವ ನಿಟ್ಟಿನಲ್ಲಿ ಅವರ ಮೇಲೆ ಪೊಲೀಸರು ಲಾಠಿಚಾರ್ಜ್ ಮತ್ತು ಜಲಫಿರಂಗಿ ಪ್ರಯೋಗಿಸಿದರು. ಇದರಿಂದಾಗಿ ಹಲವಾರು ರೈತರು ಗಾಯಗೊಂಡಿದ್ದರು.

ಸರ್ಕಾರ ಮತ್ತು ಹರ್ಯಾಣದ ರೈತರ ನಡುವೆ ಹಲವಾರು ಸುತ್ತಿನ ಮಾತುಕತೆಯ ಹೊರತಾಗಿಯೂ ರೈತರು ತಮ್ಮ ಪಟ್ಟನ್ನು ಬಿಗಿಗೊಳಿಸಿದ್ದರು.

- Advertisement -

ಈ ನಡುವೆ ಮಹತ್ವದ ಬೆಳವಣಿಗೆಯೊಂದರಲ್ಲಿ ವಾರಗಳ ಕಾಲ ನಡೆದ ಪ್ರತಿಭಟನೆ ಮತ್ತು ಗೊಂದಲಕ್ಕೆ ಕೊನೆಗೂ ತೆರೆಬಿದ್ದಿದೆ. ಈ ನಿಟ್ಟಿನಲ್ಲಿ ಮಾಜಿ ನ್ಯಾಯಾಧೀಶರು ಎರಡೂ ಕಡೆಯವರನ್ನು ಮಾತುಕತೆಗೆ ಆಹ್ವಾನಿಸಿ, ಐ.ಎ.ಎಸ್ ಅಧಿಕಾರಿಯನ್ನು ಒಂದು ತಿಂಗಳ ರಜೆಯಲ್ಲಿ ಕಳುಹಿಸಿ ಪ್ರಕರಣವನ್ನು ತನಿಖೆಗೆ ನಡೆಸುವಂತೆ ಸೂಚಿಸಿದರು. ಈ ತೀರ್ಮಾನಕ್ಕೆ ಉಭಯ ಕಡೆಯವರು ಬೆಂಬಲ ಸೂಚಿಸಿದ ಹಿನ್ನೆಲೆಯಲ್ಲಿ ಗಂಭೀರ ಪ್ರಕರಣವೊಂದು ಸುಖಾಂತ್ಯಗೊಂಡಿದೆ.

Join Whatsapp