ರಾಹುಲ್ ಗಾಂಧಿ ಭೇಟಿ ಮಾಡಿದ ರೈತರ ನಿಯೋಗ

Prasthutha|

►ಎಂಎಸ್’ಪಿಗೆ ಕಾನೂನು ಖಾತರಿ ಒತ್ತಡದ ಭರವಸೆ

- Advertisement -


ನವದೆಹಲಿ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿರುವ ರೈತರ ನಿಯೋಗ ಮಾತುಕತೆ ನಡೆಸಿದೆ.


ಈ ವೇಳೆ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್ಪಿ) ಕಾನೂನು ಖಾತ್ರಿ ನೀಡಬೇಕು ಎಂಬ ರೈತರ ಪ್ರಮುಖ ಬೇಡಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಮೇಲೆ ‘ಇಂಡಿಯಾ’ ಮೈತ್ರಿಕೂಟವು ಒತ್ತಡವನ್ನು ಹೇರಲಿದೆ ಎಂದು ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ.

- Advertisement -


ಕರ್ನಾಟಕ, ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ತೆಲಂಗಾಣ, ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ 12 ಮುಖಂಡರನ್ನು ಒಳಗೊಂಡ ರೈತರ ನಿಯೋಗವು ಸಂಸತ್ ಸಂಕೀರ್ಣದಲ್ಲಿ ರಾಹುಲ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.



Join Whatsapp