ರೈತರ ಹತ್ಯೆ ಖಂಡನೀಯ, ರಕ್ಷಿಸುವಂತದಲ್ಲ: ನಿರ್ಮಲಾ ಸೀತಾರಾಮನ್

Prasthutha|

ಬೋಸ್ಟನ್: ಲಖಿಂಪುರ ಖೇರಿ ಹಿಂಸಾಚಾರ ಸಂಪೂರ್ಣ ಖಂಡನೀಯ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಈ ಸಂಬಂಧ ಯಾರನ್ನೂ ರಕ್ಷಿಸುವ ಯೋಚನೆ ಸರ್ಕಾರದ ಮುಂದೆ ಇಲ್ಲ. ಭಾರತದ ಇತರ ಭಾಗದಲ್ಲಿ ಇಂತಹದೇ ಪ್ರಕರಣ ಬೆಳಕಿಗೆ ಬಂದಿರುವಾಗ ಉ.ಪ್ರ ಬಿಜೆಪಿ ಸರ್ಕಾರವನ್ನು ಮಾತ್ರ ದೂಷಿಸುವುದು ಸರಿಯಲ್ಲ ಎಂದು ಅವರು ಹೇಳಿದರು.

- Advertisement -

ಪ್ರಸ್ತುತ ಅಮೆರಿಕ ಪ್ರವಾಸದಲ್ಲಿರುವ ನಿರ್ಮಲಾ ಸೀತಾರಾಮನ್ ಅವರು ಹಾರ್ವರ್ಡ್ ಕೆನಡಿ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲಖಿಂಪುರ ಘಟನೆಯ ಕುರಿತ ಪ್ರಶ್ನೆಗೆ ಈ ಮೇಲಿನಂತೆ ಉತ್ತರಿಸಿದರು.

ಲಖಿಂಪುರ ಘಟನೆಗೆ ಸಂಬಂಧಿಸಿದಂತೆ ಆಶಿಶ್ ಮಿಶ್ರಾ ಅವರನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿತ್ತು.

- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ಸರ್ಕಾರ ಅವರೊಂದಿಗೆ ಮಾತುಕತೆಗೆ ಸಿದ್ದವಿದೆ ಎಂದು ಸೀತಾರಾಮನ್ ತಿಳಿಸಿದರು.

Join Whatsapp