ರೈತರ ಪ್ರತಿಭಟನೆಗೆ ಆರು ತಿಂಗಳು | ಕೃಷಿ ಕಾಯ್ದೆ ಹಿಂಪಡೆಯಲು ಒತ್ತಾಯಿಸಿ ಇಂದು ʼಕರಾಳ ದಿನʼ

Prasthutha|

ನವದೆಹಲಿ : ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಆರು ತಿಂಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಇಂದು ʼಕರಾಳ ದಿನʼ ಆಚರಿಸಲು ನಿರ್ಧರಿಸಲಾಗಿದೆ.

- Advertisement -

ಆರು ತಿಂಗಳು ಕಳೆದರೂ ಸರಕಾರ ತಮ್ಮ ಬೇಡಿಕೆಗಳಿಗೆ ಸ್ಪಂದಿಸದ ಹಿನ್ನೆಲೆಯಲ್ಲಿ ರೈತರು ʼಕರಾಳ ದಿನʼ ಆಚರಿಸಲು ನಿರ್ಧರಿಸಿದ್ದಾರೆ. ಆ ಪ್ರಯುಕ್ತ ಸರಕಾರದ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಸಲು ಸಂಯುಕ್ತ ಕಿಸಾನ್‌ ಮೋರ್ಚಾ ಕರೆ ನೀಡಿದೆ.

ದೆಹಲಿ ಗಡಿ ಪ್ರದೇಶಗಳಾದ ಟಿಕ್ರಿ, ಸಿಂಘು, ಗಾಜಿಪುರ ಗಡಿಗಳಲ್ಲಿ ದೊಡ್ಡ ಸಂಖ್ಯೆಯ ರೈತರು ನೆರೆದಿದ್ದಾರೆ. ರೈತರ ಪ್ರತಿಭಟನೆಗೆ ಹತ್ತಕ್ಕೂ ಹೆಚ್ಚು ರಾಜಕೀಯ ಪಕ್ಷಗಳು ಬೆಂಬಲ ಘೋಷಿಸಿವೆ.

- Advertisement -

ಕೇಂದ್ರದ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ರೈತರು ಪಟ್ಟು ಹಿಡಿದಿದ್ದಾರೆ. ಕೋವಿಡ್‌ ಸಂಕಟದ ನಡುವೆಯೂ ರೈತರ ಪ್ರತಿಭಟನೆ ಮುಂದುವರಿದಿದೆ.

Join Whatsapp