Home ಟಾಪ್ ಸುದ್ದಿಗಳು ಆತ್ಮಹತ್ಯೆ ಮಾಡಿಕೊಂಡ ರೈತರ ತಲೆಬುರುಡೆ, ಮೂಳೆಗಳನ್ನಿಟ್ಟು ರೈತರ ಪ್ರತಿಭಟನೆ

ಆತ್ಮಹತ್ಯೆ ಮಾಡಿಕೊಂಡ ರೈತರ ತಲೆಬುರುಡೆ, ಮೂಳೆಗಳನ್ನಿಟ್ಟು ರೈತರ ಪ್ರತಿಭಟನೆ

ನವದೆಹಲಿ: ಬೆಳೆಗೆ ಉತ್ತಮ ಬೆಲೆ ನಿಗದಿ, ನದಿ ಜೋಡಣೆ ವಿಚಾರ ಕುರಿತು ತಮಿಳುನಾಡಿನ 200ಕ್ಕೂ ಅಧಿಕ ರೈತರು ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸಿದರು. ಅವರು ಆತ್ಮಹತ್ಯೆ ಮಾಡಿಕೊಂಡ ರೈತರ ತಲೆಬುರುಡೆಗಳು ಹಾಗೂ ಮೂಳೆಗಳನ್ನಿಟ್ಟುಕೊಂಡು ಪ್ರತಿಭಟನೆ ನಡೆಸಿದ್ದಾರೆ.


ಕೃಷಿಯಲ್ಲಿ ಆದಾಯ ದ್ವಿಗುಣಗೊಳಿಸುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದ್ದರೂ ಬೆಳೆಗಳ ಬೆಲೆ ಏರಿಕೆ ಮಾಡಿಲ್ಲ ಎಂದು ರೈತರು ಪ್ರಶ್ನಿಸಿದರು. 2019ರಲ್ಲಿ ಪ್ರಧಾನಿ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ, ನದಿಗಳನ್ನು ಪರಸ್ಪರ ಜೋಡಿಸುವುದಾಗಿ ಕೂಡ ಮಾತುಕೊಟ್ಟಿದ್ದರು ಅನ್ನು ಕೂಡ ಮಾಡಿಲ್ಲ ಎಂದು ನ್ಯಾಷನಲ್ ಸೌತ್ ಇಂಡಿಯಾ ರಿವರ್ ಇಂಟರ್ಲಿಂಕಿಂಗ್ ಫಾರ್ಮರ್ಸ್ ಅಸೋಸಿಯೇಶನ್ ನ ಅಧ್ಯಕ್ಷ ಅಯ್ಯಕಣ್ಣು ಹೇಳಿದ್ದಾರೆ.

Join Whatsapp
Exit mobile version