ರೈತರ ರಸ್ತೆ ತಡೆ | ದೆಹಲಿ ಗಡಿ ಭಾಗಗಳಲ್ಲಿ ಮತ್ತೊಮ್ಮೆ ಇಂಟರ್ನೆಟ್ ಕಡಿತ

Prasthutha|

ನವದೆಹಲಿ : ರೈತರು ಪ್ರತಿಭಟನೆ ನಡೆಸುತ್ತಿರುವ ದೆಹಲಿ ಗಡಿ ಪ್ರದೇಶಗಳಲ್ಲಿ ಮತ್ತೊಮ್ಮೆ ಇಂಟರ್ನೆಟ್ ಸೇವೆ ಕಡಿತಗೊಳಿಸಲಾಗಿದೆ.

- Advertisement -

ರೈತರ ರಸ್ತೆ ತಡೆ ಪ್ರತಿಭಟನೆಯ ಹಿನ್ನೆಲೆಯಲ್ಲಿ ಇಂದು ರಾತ್ರಿ 12 ಗಂಟೆ ವರೆಗೂ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ ಎಂದು ವರದಿಗಳಾಗಿವೆ.

ಸಾರ್ವಜನಿಕ ಸುರಕ್ಷತೆಯ ದೃಷ್ಟಿಯಿಂದ ಸಿಂಘು, ಗಾಝಿಪುರ, ಟಿಕ್ರಿ ಮತ್ತು ಅವುಗಳ ಅಕ್ಕಪಕ್ಕದ ಪ್ರದೇಶಗಳಲ್ಲಿ ಇಂಟರ್ನೆಟ್ ಸೇವೆ ಕಡಿತಗೊಳಿಸಲಾಗಿದೆ ಎಂದು ಕೇಂದ್ರ ಗೃಹ ಇಲಾಖೆ ಮಾಹಿತಿ ನೀಡಿದೆ.

- Advertisement -

ಈಗಾಗಲೇ ದೆಹಲಿ ಗಡಿ ಭಾಗಗಳಲ್ಲಿ ಮತ್ತು ಹರ್ಯಾಣದಲ್ಲಿ ಇಂಟರ್ನೆಟ್ ಸೇವೆ ಕಡಿತಗೊಳಿಸಿರುವುದಕ್ಕೆ ಸಂಬಂಧಿಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸೆಲೆಬ್ರಿಟಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Join Whatsapp