ರೈತರ ಪ್ರತಿಭಟನೆ | ಮೋದಿ ಸರಕಾರದ ಕಾನೂನು ಬೆಂಬಲಿಸಿದ ನಟ, ಸಂಸದ ಸನ್ನಿ ಡಿಯೊಲ್ ಗೆ ವೈ-ಕೆಟಗರಿ ಭದ್ರತೆ

Prasthutha|

ಚಂಡೀಗಢ : ಪ್ರಧಾನಿ ನರೇಂದ್ರ ಮೋದಿ ಸರಕಾರದ ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿರುವ ನಡುವೆ, ಕೃಷಿ ಕಾನೂನನ್ನು ಬೆಂಬಲಿಸಿ ಹೇಳಿಕೆ ನೀಡಿದ್ದ ನಟ, ಬಿಜೆಪಿ ಸಂಸದ ಸನ್ನಿ ಡಿಯೊಲ್ ಗೆ ಭದ್ರತೆ ಹೆಚ್ಚಿಸಲಾಗಿದೆ.

- Advertisement -

64ರ ಹರೆಯದ ಡಿಯೊಲ್ ಗೆ ವೈ ಕೆಟಗರಿ ಭದ್ರತೆ ನೀಡಲಾಗಿದ್ದು, ಇಬ್ಬರು ಕಮಾಂಡೊಗಳು, ಪೊಲೀಸ್ ಸೇರಿದಂತೆ 11 ಭದ್ರತಾ ಸಿಬ್ಬಂದಿ ಅವರ ರಕ್ಷಣೆಯ ಕಾರ್ಯದಲ್ಲಿ ನಿರತರಾಗಿದ್ದಾರೆ.

ಸರಕಾರದ ನೂತನ ಕೃಷಿ ಕಾನೂನನ್ನು ವಿರೋಧಿಸಿ ಉತ್ತರ ಭಾರತದ, ಮುಖ್ಯವಾಗಿ ಪಂಜಾಬ್ ಮತ್ತು ಹರ್ಯಾಣದ ರೈತರು ವಿರೋಧಿಸುತ್ತಿದ್ದಾರೆ. ಬಿಜೆಪಿಗರು ಈ ರೈತರ ಹೋರಾಟವನ್ನು ಹತ್ತಿಕ್ಕುವ ನಿಟ್ಟಿನಲ್ಲಿ ಅಪಪ್ರಚಾರಗಳನ್ನೂ ನಡೆಸುತ್ತಿದ್ದಾರೆ. ಈ ನಡುವೆ, ಡಿಯೊಲ್ ಅವರ ಹೇಳಿಕೆಯಿಂದಾಗಿ ಅವರಿಗೆ ಪ್ರಾಣ ಬೆದರಿಕೆಯಿರುವ ಸಾಧ್ಯತೆಯಿಂದ ಭದ್ರತೆ ಹೆಚ್ಚಿಸಲಾಗಿದೆ ಎನ್ನಲಾಗಿದೆ.

Join Whatsapp