ರೈತರ ಪ್ರತಿಭಟನೆ | ಪ್ಯಾರಾ ಮಿಲಿಟರಿ ಕಳುಹಿಸುವಂತೆ ಸರಕಾರಕ್ಕೆ ಪೊಲೀಸ್ ಕಮೀಶನರ್ ಮನವಿ

Prasthutha|

ನವದೆಹಲಿ : ರೈತರ ಪ್ರತಿಭಟನೆ ಹತ್ತಿಕ್ಕಲು ದೆಹಲಿ ಪೊಲೀಸ್ ಕಮೀಶನರ್ ಪೊಲೀಸರಿಗೆ ನಿರ್ದೇಶಿಸಿದ್ದಾರೆ ಎಂದು ವರದಿಗಳಾಗಿವೆ. ಸ್ಥಳಕ್ಕೆ ಪ್ಯಾರಾ ಮಿಲಿಟರಿ ಪಡೆ ಕಳುಹಿಸುವಂತೆ ಅವರು ಸರಕಾರಕ್ಕೆ ಮನವಿ ಮಾಡಿದ್ದಾರೆ ಎನ್ನಲಾಗುತ್ತಿದೆ.

- Advertisement -

ಈಗಾಗಲೇ ಕ್ಷಿಪ್ರ ಕಾರ್ಯಾಚರಣಾ ಪಡೆ, ಪೊಲೀಸರು ಸೇರಿದಂತೆ ವಿವಿಧ ಭದ್ರತಾ ಸಿಬ್ಬಂದಿ ಭದ್ರತೆಗೆ ನಿಯೋಜಿಸಲಾಗಿದೆ. ಈ ನಡುವೆ, ಪ್ರತಿಭಟನೆ ತೀವ್ರಗೊಂಡಿರುವುದರಿಂದ 15 ತುಕಡಿ ಪ್ಯಾರಾ ಮಿಲಿಟರಿ ಪಡೆ ನಿಯೋಜಿಸುವಂತೆ ಪೊಲೀಸ್ ಕಮೀಶನರ್ ಸರಕಾರಕ್ಕೆ ಮನವಿ ಮಾಡಿದ್ದಾರೆ ಎಂದು ವರದಿಗಳು ತಿಳಿಸಿವೆ.

Join Whatsapp